ನವದೆಹಲಿ: ದೆಹಲಿ ಸರ್ಕಾರ ಹಿಂಬಾಲಿಸುವಿಕೆಯನ್ನು ಜಾಮೀನು ರಹಿತ ಅಪರಾಧವನ್ನಾಗಿಸಲು ನಿರ್ಧರಿಸಿದ್ದು, ಈ ಸಂಬಂಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದೆ.
ಆಮ್ ಆದ್ಮಿ ಪಕ್ಷದ ಅಲ್ಕಾ ಲಾಂಬ ಅವರು ನಿರ್ಣಯವನ್ನು ಅಂಗೀಕರಿಸಿದರು.
ಮಹಿಳೆಯರನ್ನು ಹಿಂಬಾಲಿಸಿಕೊಂಡು ಬಂದು ಕೊಲೆಗಳು ನಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಲಾಂಬ, ಈ ನಿಟ್ಟಿನಲ್ಲಿ ಭಾರತೀಯ ನೀತಿ ಸಂಹಿತೆ 354 ಡಿಗೆ ತಿದ್ದುಪಡಿಯನ್ನು ತರುವಂತೆ ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸತ್ಯೇಂದ್ರ ಜೈನ್, ಈ ಬಗ್ಗೆ ಸರ್ಕಾರ ಮಸೂದೆಯೊಂದನ್ನು ತಂದು, ಕೇಂದ್ರ ಸರ್ಕಾರದ ಮೂಲಕ ಜಾರಿಗೊಳಿಸಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.