ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಆರ್ಎಸ್ಎಸ್ ಸ್ವಯಂಸೇವಕರು ಸಾಕಷ್ಟು ಶ್ರಮಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
’ಕರ್ನಾಟಕದಲ್ಲಿ ಬಿಜೆಪಿ ಯಶಸ್ಸಿನ ಶ್ರೇಯಸ್ಸು ಯಡಿಯೂರಪ್ಪರಂತಹ ನಾಯಕರಿಂದ ಹಿಡಿದು ಸಣ್ಣ ಪುಟ್ಟ ಕಾರ್ಯಕರ್ತರಿಗೂ ಸಂದಾಯವಾಗಬೇಕು, ಇದರಲ್ಲಿ ಆರ್ಎಸ್ಎಸ್ ಸ್ವಯಂಸೇವಕರ ಪಾಲು ಬಹಳಷ್ಟಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ ಭಾಗದಲ್ಲಿ ಸಂಘ ಪರಿವಾರದವರು ನಮಗೆ ಸಾಕಷ್ಟು ಶ್ರಮಿಸಿದ್ದಾರೆ’ ಎಂದಿದ್ದಾರೆ.
ಬಿಜೆಪಿ ಪರವಾದ ಜನಾಭಿಪ್ರಾಯ ನೀಡಿದ್ದಕ್ಕೆ ಕರ್ನಾಟಕ ಜನತೆಯನ್ನು ಅವರು ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.