ನವದೆಹಲಿ: ಎಪ್ರಿಲ್ 14ರಿಂದ ಮೇ 15ರವರೆಗಿನ ಗ್ರಾಮ ಸ್ವರಾಜ್ ಅಭಿಯಾನದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ 7 ಮಹತ್ವದ ಯೋಜನೆಗಳು ದೇಶದ ೪೮೪ ಜಿಲ್ಲೆಗಳ 16,580 ಗ್ರಾಮಗಳನ್ನು ತಲುಪಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇದೇ ಮೊದಲ ಬಾರಿಗೆ ದೇಶದ ಬಡ ಜನರು ಸರ್ಕಾರದ ಯೋಜನೆ ತಮ್ಮ ಮನೆ ಬಾಗಿಲಿಗೆ ತಲುಪುತ್ತಿರುವುದನ್ನು ನೋಡುತ್ತಿದ್ದಾರೆ’ ಎಂದರು.
ಮುಂದಿನ ಲೋಕಸಭಾ ಚುನಾವಣೆಯೊಳಗೆ ಎಲ್ಲಾ ಯೋಜನೆಗಳು ದೇಶದ ಪ್ರತಿಯೊಬ್ಬನ ಮನೆಗೂ ತಲುಪುವಂತೆ ಮೋದಿ ಸರ್ಕಾರ ನೋಡಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಗ್ರಾಮ ಸ್ವರಾಜ್ ಅಭಿಯಾನದ ವೇಳೆ ಬಹುತೇಕ ಎಲ್ಲಾ ಗ್ರಾಮಗಳನ್ನು ತಲುಪಲಾಗಿದೆ, ಇದರಲ್ಲಿ ಶೇ.50ರಷ್ಟು ಕುಟುಂಬಗಳು ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾಗಿವೆ. ವಿದ್ಯುತ್ ಸಂಪರ್ಕ 5,02,434 ಕುಟುಂಬವನ್ನು ತಲುಪಿದೆ, 16,682 ಗ್ರಾಮಗಳಿಗೆ 25.03 ಲಕ್ಷ ಎಲ್ಇಡಿ ಬಲ್ಬ್ಗಳನ್ನು ವಿತರಣೆ ಮಾಡಲಾಗಿದೆ. ಜನ್ಧನ್ ಯೋಜನೆ 25,53,599 ಫಲಾನುಭವಿಗಳನ್ನು ಹೊಂದಿದೆ. ಪ್ರಧಾನಿಗಳ ಜೀವನ್ ಜ್ಯೋತಿ ಭಿಮಾ ಯೋಜನೆ 16,14,388 ಫಲಾನುಭವಿಗಳನ್ನು ಹೊಂದಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.