ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಂಡಾಡಿರುವ ಬ್ರಿಟನ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೋನ್ ಅವರು ಮೋದಿಯಂತಹ ನಾಯಕನನ್ನು ಪಡೆಯಲು ಭಾರತ ಪುಣ್ಯ ಮಾಡಿದೆ ಎಂದಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಇಂಡಿಯಾ ಚೇಂಬರ್ ಆಫ್ ಕಾಮರ್ಸನ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೋದಿಯವರಿಗೆ ದೇಶದ ಬಗ್ಗೆ ಸ್ಪಷ್ಟ ದೃಷ್ಟಿಕೋನವಿದೆ. ಅವರನ್ನು ಭೇಟಿಯಾದ ವೇಳೆ ದೇಶದ ದೀರ್ಘಾವಧಿ ಸಮಸ್ಯೆಗಳ ಬಗ್ಗೆ ಅವರಿಗೆ ಸ್ಪಷ್ಟತೆ ಇರುವುದು ಅರಿವಾಯಿತು ಎಂದಿದ್ದಾರೆ. ಮೋದಿ ಆರಂಭಿಸಿರುವ ಕೌಶಲ್ಯ ಭಾರತ ಯೋಜನೆಯ ಬಗ್ಗೆ ಶ್ಲಾಘನೆ
ವ್ಯಕ್ತಪಡಿಸಿದ ಕ್ಯಾಮರೋನ್ ಕೇವಲ ಸರ್ಕಾರದಿಂದ ಮಾತ್ರ ಈ ಯೋಜನೆಯ ಗುರಿಯನ್ನು ತಲುಪಲು ಸಾಧ್ಯವಿಲ್ಲ, ಜನರ ಸಹಭಾಗಿತ್ವವು ಅತ್ಯಗತ್ಯವಾಗಿ ಬೇಕಾಗುತ್ತದೆ ಎಂದು ಪ್ರತಿಪಾದಿಸಿದರು. ಭಾರತವನ್ನು ಅವಕಾಶಗಳ ನಾಡು ಎಂದು ಬಣ್ಣಿಸಿದ ಅವರು ಭಾರತ ಮತ್ತು ಯುಕೆಯಂತಹ ದೇಶಗಳ ಸಮೃದ್ಧಿ ಮಾರುಕಟ್ಟೆಯ ಕಾರ್ಯಾಚರಣೆ ಮತ್ತು ಉದ್ಯಮಗಳ ಬೆಳವಣಿಗೆಯಲ್ಲಿದೆ ಎಂದು ಪ್ರತಿಪಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.