ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ನಿಧನರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ 4 ಗಂಟೆಗೆ ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಜರುಗಲಿದೆ.
ಆಸ್ಪತ್ರೆಯಿಂದ ತಂದ ಬಳಿಕ ಪಾರ್ಥೀವ ಶರೀರವನ್ನು ಅವರ ಅಧಿಕೃತ ನಿವಾಸ 6ಎ ಕೃಷ್ಣ ಮೆನನ್ ಮರ್ಗ್ನಲ್ಲಿ ಇಡಲಾಗಿದ್ದು, ಗಣ್ಯಾತಿಗಣ್ಯರು ಅಲ್ಲಿಗೆ ಆಗಮಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಬಳಿಕ ಬಿಜೆಪಿ ಕೇಂದ್ರ ಕಛೇರಿ ದೀನ್ ದಯಾಳ್ ಉಪಾಧ್ಯಾಯ ಮಾರ್ಗ್ಗೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.
ಮಧ್ಯಾಹ್ನ 1 ಗಂಟೆಗೆ ಇಲ್ಲಿಂದ ಮೆರವಣಿಗೆಯ ಮೂಲಕ ಸ್ಮೃತಿ ಸ್ಥಳಕ್ಕೆ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ಜರುಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.