ನವದೆಹಲಿ : 2019 ರ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಜೆಂಡಾವನ್ನು ಸಿದ್ಧಪಡಿಸಿದೆ.
ನವದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.
ಈ ವೇಳೆ ಅಜೇಯ ಭಾರತ್, ಅಟಲ್ ಬಿಜೆಪಿ ಎಂಬ ಘೋಷವಾಕ್ಯವನ್ನು ಪ್ರಕಟಿಸಿದ್ದು, ಭಾರತ ಸದಾ ಅಜೇಯವಾಗಿರುತ್ತದೆ ಮತ್ತು ಬಿಜೆಪಿ ಅಟಲವಾಗಿರುತ್ತದೆ ಎಂಬುದನ್ನು ಈ ಘೋಷವಾಕ್ಯ ಪ್ರತಿನಿಧಿಸುತ್ತದೆ.
ಪಕ್ಷದ ಪ್ರಮುಖ ಮೌಲ್ಯಗಳು ಮತ್ತು ದೇಶದ ಅಭಿವೃದ್ಧಿಯಲ್ಲಿ ಅದಕ್ಕಿರುವ ಬದ್ಧತೆಯನ್ನು ಬಿಂಬಿಸುವಂತೆ 2019 ರ ಲೋಕಸಭಾ ಚುನಾವಣೆಯನ್ನು ಬಿಜೆಪಿ ಕೈಗೆತ್ತಿಕೊಳ್ಳಲಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರತಿಪಕ್ಷಗಳ ಮಹಾ ಒಗ್ಗಟ್ಟನ್ನು ಟೀಕಿಸಿದ್ದಾರೆ. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳದವರು ಮೈತ್ರಿಯ ಬಗ್ಗೆ ಮಾತನಾಡುತ್ತಿರುವುದು ವಿಷಾದನೀಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೊಡ್ಡ ಪ್ರಾದೇಶಿಕ ಪಕ್ಷಗಳು ಹಾಗೂ ಸಣ್ಣ ಪುಟ್ಟ ಪಕ್ಷಗಳು ಯಾವುದಕ್ಕೂ ಕಾಂಗ್ರೆಸ್ ನೇತೃತ್ವದಲ್ಲಿ ಚುನಾವಣೆ ಎದುರಿಸುವ ಮನಸ್ಸಿನಲ್ಲ ಎಂದು ಹೇಳಿದ್ದಾರೆ.
BJP National Executive meet saw extensive discussions on many subjects. Party colleagues expressed their insightful views.
Our Party is humbled by the strong support across India. In the spirit of ‘Ajay Bharat, Atal Bhajpa’ we will continue working tirelessly for India’s growth. pic.twitter.com/aWsNxkQwaM— Narendra Modi (@narendramodi) September 9, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.