ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದಿನಿಂದ ಮೂರು ದಿನಗಳ ಕಾಲ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಆಹ್ವಾನದ ಮೇರೆಗೆ ಅವರು ಈ ಪ್ರವಾಸವನ್ನು ಹಮ್ಮಿಕೊಂಡಿದ್ದು, ಮೊದಲೇ ವಿಶ್ವಯುದ್ಧದ ಕದನವಿರಾಮದ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಿ, ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮೊದಲನೇ ವಿಶ್ವ ಯುದ್ಧದಲ್ಲಿ ಅತೀಹೆಚ್ಚು ಯೋಧರನ್ನು ಕಳುಹಿಸಿಕೊಟ್ಟ ದೇಶಗಳ ಪೈಕಿ ಭಾರತವೂ ಒಂದು. ಕದನ ವಿರಾಮದ ಶತಮಾನೋತ್ಸವ ಸಮಾರಂಭದಲ್ಲಿ ಭಾರತ ಭಾಗಿಯಾಗುತ್ತಿರುವುದು ಈ ಯೋಧರು ಮಾಡಿದ ತ್ಯಾಗಕ್ಕೆ ಗೌರವ ಸಮರ್ಪಣೆ ಮಾಡಿದಂತಾಗುತ್ತದೆ. ಜಾಗತಿಕ ಶಾಂತಿ ಮತ್ತು ಭದ್ರತೆಗೆ ಇತಿಹಾದಲ್ಲಿ ಭಾರತ ನೀಡಿದ ಕೊಡುಗೆಯನ್ನು ಜಗತ್ತು ಮತ್ತೊಮ್ಮೆ ಸ್ಮರಿಸಲಿದೆ.
ಈ ಶತಮಾನೋತ್ಸವ ಸಮಾರಂಭಕ್ಕೆ ಸುಮಾರು 50 ದೇಶಗಳ ಪ್ರತಿನಿಧಿಗಳು ಆಗಮಿಸುವ ನಿರೀಕ್ಷೆ ಇದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಇದರ ನೇತೃತ್ವ ವಹಿಸಲಿದ್ದಾರೆ.
source: newsbharati
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.