ರಾಯ್ಪುರ: ಚುನಾವಣಾ ಅಖಾಡವಾಗಿ ಬದಲಾಗಿರುವ ಛತ್ತೀಸ್ಗಢದಲ್ಲಿ ನಕ್ಸಲ್ರು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹವಣಿಸುತ್ತಿದ್ದಾರೆ. ಜನರು ಭಯಭೀತಗೊಳಿಸಿ ಚುನಾವಣೆ ಬಹಿಷ್ಕರಿಸುವಂತೆ ಮಾಡುವುದು ಅವರ ಗುರಿಯಾಗಿದೆ. ಆದರೆ ಭದ್ರತಾ ಪಡೆಗಳು ಈ ಕೆಂಪು ಉಗ್ರರ ಹಡೆಮುರಿ ಕಟ್ಟುವ ಕಾರ್ಯವನ್ನು ಸಕ್ರಿಯವಾಗಿ ಮಾಡುತ್ತಿವೆ.
ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ನಕ್ಸಲರನ್ನು ನಿನ್ನೆ ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಬಳಿಕ ಇಬ್ಬರು ಶಂಕಿತ ನಕ್ಸರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.
ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಇವರಿಂದ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪುಷ್ಪಪಾಲ್ ಪೊಲೀಸ್ ಸ್ಟೇಶನ್ ಬಳಿಯ ಗ್ರಾಮವೊಂದರ ಅರಣ್ಯದ ಸಮೀಪದಲ್ಲಿ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಚುನಾವಣಾ ಕರ್ತವ್ಯ ಮುಗಿಸಿ ಬರುತ್ತಿದ್ದ ವೇಳೆ ಇವರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಚಕಮಕಿ ನಿಂತ ಬಳಿಕ ಇಬ್ಬರು ನಕ್ಸಲರ ದೇಹವನ್ನು ವಶಕ್ಕೆ ಪಡೆಯಲಾಗಿದೆ. ಇದೇ ಜಾಗದಿಂದ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ.
ಸುಕ್ಮಾ ಅತೀಹೆಚ್ಚು ನಕ್ಸಲ್ ಬಾಧಿತ ಪ್ರದೇಶವಾಗಿದ್ದು, ಸೋಮವಾರ ಇಲ್ಲಿ ಚುನಾವಣೆ ಜರುಗಿತ್ತು.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.