ಶ್ರೀನಗರ: ಕಾರ್ಯಾಚರಣೆಯಲ್ಲಿ ಸ್ವಾತಂತ್ರ್ಯವನ್ನು ನೀಡಿದ ಹಿನ್ನಲೆಯಲ್ಲಿ ಈ ಬಾರಿ ಜಮ್ಮು ಕಾಶ್ಮೀರದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ಹೆಚ್ಚು ಸಫಲತೆಯನ್ನು ಪಡೆದುಕೊಂಡಿದೆ. ಒಟ್ಟು 311 ಉಗ್ರರು ಈ ವರ್ಷ ಹತ್ಯೆಗೀಡಾಗಿದ್ದಾರೆ ಎಂದು ಲೆ.ಜ.ಅನಿಲ್ ಭಟ್ ತಿಳಿಸಿದ್ದಾರೆ.
58 ಮಂದಿ ಉಗ್ರರನ್ನು ಬಂಧಿಸಲಾಗಿದೆ, ಐವರು ಉಗ್ರರು ತಾವಾಗಿಯೇ ಬಂದು ಶರಣಾಗಿದ್ದಾರೆ. ಡಿ.31ರ ಬೆಳಗ್ಗಿನವರೆಗೆ ಒಟ್ಟು 311 ಮಂದಿ ಹತ್ಯೆಯಾಗಿದ್ದಾರೆ. ಇದು ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಸಫಲತೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಪಡೆಗಳು, ಜಮ್ಮು ಕಾಶ್ಮೀರ ಪೊಲೀಸರು ಮತ್ತು ಪ್ಯಾರಾಮಿಲಿಟರಿ ಪಡೆಗಳ ಸಂಯೋಜಿತ ಕಾರ್ಯಾಚರಣೆಗೆ ಈ ಸಫಲತೆಯ ಶ್ರೇಯಸ್ಸು ಸಲ್ಲುತ್ತದೆ ಎಂದಿದ್ದಾರೆ.
2018ರವರೆಗೂ ವರ್ಷಕ್ಕೆ ಸುಮಾರು 200 ಉಗ್ರರ ಹತ್ಯೆಯಾಗುತ್ತಿತ್ತು, ಆದರೆ ಈ ಬಾರಿ ಸಂಖ್ಯೆ ಏರಿಕೆಯಾಗಿದೆ. ಕಾರ್ಯಾಚರಣೆಗೆ ಸಿಕ್ಕ ಸ್ವಾತಂತ್ರ್ಯ, ಪಡೆಗಳ ಸಂಯೋಜಿತ ಹೋರಾಟ ಇದಕ್ಕೆ ಕಾರಣ ಎಂದಿದ್ದಾರೆ.
sources: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.