ಮುಂಬಯಿ: ಡಿಜಿಟಲ್ ಪೇಮೆಂಟ್ನ್ನು ದೇಶದಲ್ಲಿ ಉತ್ತೇಜಿಸುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ.
5 ಸದಸ್ಯರನ್ನು ಒಳಗೊಂಡ ಸಮಿತಿಗೆ ಯುಐಡಿಎಐನ ಮಾಜಿ ಮುಖ್ಯಸ್ಥ ನಂದನ್ ನೀಲೇಕಣಿಯವರು ಮುಖ್ಯಸ್ಥರಾಗಿದ್ದಾರೆ. ಆರ್ಬಿಐನ ಮಾಜಿ ಗವರ್ನರ್ ಎಚ್.ಆರ್ ಖಾನ್, ಮಾಹಿತಿ ಸಚಿವಾಲಯದ ಮಾಜಿ ಕಾರ್ಯದರ್ಶಿ ಅರುಣ ಶರ್ಮಾ ಅವರು ಸದಸ್ಯರಾಗಿದ್ದಾರೆ.
ಪ್ರಸ್ತುತ ಇರುವ ಡಿಜಟಲೀಕರಣದ ಸ್ಥಾನಮಾನವನ್ನು ಪರಿಶೀಲಿಸಿ, ಡಿಜಿಟಲ್ ವಾತಾವರಣದ ನಡುವಣ ಅಂತರವನ್ನು ಕುಗ್ಗಿಸುವ ಕ್ರಮಗಳ ಬಗ್ಗೆ ಸಲಹೆ ನೀಡಲಿದ್ದಾರೆ.
ಆರ್ಥಿಕತೆ ಮತ್ತು ಹಣಕಾಸು ಒಳಗೊಳ್ಳುವಿಕೆಯಲ್ಲಿ ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ಕ್ರಮಗಳ ಬಗ್ಗೆ ಅಧ್ಯಯನವನ್ನು ಈ ಸಮಿತಿ ನಡೆಸಲಿದೆ. ಡಿಜಿಟಲೀಕರಣದ ಸುರಕ್ಷತೆಯ ಬಗ್ಗೆಯೂ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸೂಚಿಸಲಿದೆ. ಗ್ರಾಹಕರ ಹೆಚ್ಚಳಕ್ಕೆ ಬೇಕಾದ ರೂಪುರೇಷೆಗಳನ್ನು ಸಿದ್ಧಪಡಿಸಲಿದೆ.
source: newsbharati
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.