ರಾಂಚಿ: ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಮತ್ತು ಝಾರ್ಖಾಂಡ್ ಸಿಎಂ ರಘುಬರ್ ದಾಸ್ ಅವರು ರಾಂಚಿಯಲ್ಲಿ ನಡೆದ ಗ್ಲೋಬಲ್ ಸ್ಕಿಲ್ ಸಮಿತ್ನಲ್ಲಿ ಯುವಕರಿಗೆ ಖಾಸಗಿ ವಲಯದ 1,06,619 ಉದ್ಯೋಗ ಪತ್ರಗಳನ್ನು ಹಸ್ತಾಂತರ ಮಾಡಿದರು.
ಸ್ಕಿಲ್ ಗ್ಲೋಬಲ್ ಸಮಿತ್ನಲ್ಲಿ ಝಾರ್ಖಾಂಡ್ ರಾಜ್ಯಪಾಲ ದ್ರೌಪದಿ ಮುರ್ಮು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು, 17 ದೇಶಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ಅನೇಕ ಕೌಶಲ್ಯಭರಿತ ಯುವಕರು ಇಲ್ಲಿ ಉದ್ಯೋಗ ಅವಕಾಶಗಳನ್ನು ಗಿಟ್ಟಿಸಿಕೊಂಡರು.
’ಭಾರತದಲ್ಲಿ ಪ್ರತಿಭೆಗಳ ಸಾಗರವೇ ಇದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಜಗತ್ತಿಗೆ ಬೇಕಾದ ಕೌಶಲ್ಯಭರಿತ ಮಾನವ ಸಂಪನ್ಮೂಲವನ್ನು ಒದಗಿಸುವ ಶಕ್ತಿ ಭಾರತಕ್ಕಿದೆ’ ಎಂದು ಪ್ರಧಾನ್ ಹೇಳಿದ್ದಾರೆ.
source: aninews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.