ನವದೆಹಲಿ: 9ನೇ ರಾಷ್ಟ್ರೀಯ ಮತದಾರರ ದಿನವನ್ನು ಶುಕ್ರವಾರ ಆಚರಿಸಲಾಗುತ್ತಿದೆ. 10 ಲಕ್ಷ ಮತಗಟ್ಟೆಯನ್ನೊಳಗೊಂಡ ದೇಶದ 6 ಲಕ್ಷ ಸ್ಥಳಗಳಲ್ಲಿ ಮತದಾರರ ದಿನದ ಪ್ರಯುಕ್ತ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ. ಕಾರ್ಯಕ್ರಮಗಳಲ್ಲಿ ನವಮತದಾರರಿಗೆ ಸನ್ಮಾನ ಮತ್ತು ಮತದಾರರ ಗುರುತಿನ ಚೀಟಿಯನ್ನು ಹಸ್ತಾಂತರ ಮಾಡುವ ಕಾರ್ಯಗಳೂ ಜರಗಲಿವೆ.
ರಾಷ್ಟ್ರ ರಾಜಧಾನಿಯ ಮಾನೆಕ್ಷಾ ಸೆಂಟರ್ನಲ್ಲಿ ಚುನಾವಣಾ ಆಯೋಗವು ಕಾರ್ಯಕ್ರಮವನ್ನು ಆಯೋಜನೆಗೊಳಿಸಲಿದೆ. ಮುಖ್ಯ ಅತಿಥಿಯಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರು ಭಾಗವಹಿಸಲಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ‘ಯಾವ ಮತದಾರನೂ ಹಿಂದಕ್ಕೆ ಉಳಿಯಬಾರದು’ ಎಂಬ ಥೀಮ್ನೊಂದಿಗೆ ಅಭಿಯಾನವನ್ನು ಚುನಾವಣಾ ಆಯೋಗ ಆರಂಭಿಸಿದೆ. ’ಮೈ ವೋಟ್ ಮ್ಯಾಟರ್ಸ್’ ಎಂಬ ತ್ರೈಮಾಸಿಕ ಮ್ಯಾಗಜೀನ್ವೊಂದನ್ನೂ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ.
ಚುನಾವಣೆ ಆಯೋಜನೆಗೊಳಿಸುವುದರಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡಿದ ಅಧಿಕಾರಿಗಳಿಗೆ ರಾಷ್ಟ್ರೀಯ ಪುರಸ್ಕಾರವನ್ನೂ ನೀಡಲಾಗುತ್ತದೆ. ಅಲ್ಲದೇ, ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಕೊಡುಗೆಯನ್ನು ನೀಡಿದ ಮಾಧ್ಯಮಗಳಿಗೆ, ಸಂಸ್ಥೆಗಳಿಗೂ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.