
ನವದೆಹಲಿ: 2014-18ರಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ದೇಶದಲ್ಲಿ 10 ಕೋಟಿ ಉದ್ಯೋಗವನ್ನು ಸೃಷ್ಟಿಸಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ವರದಿ ನೀಡಿದ ಹಿನ್ನಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
2014 ಮತ್ತು 2018ರ ಸಾಲಿನಲ್ಲಿ 18 ಲಕ್ಷ ಉದ್ಯಮಿಗಳು ಕ್ರೆಡಿಟ್ ಗ್ಯಾರಂಟಿ ಯೋಜನೆಯಡಿ ಸಾಲವನ್ನು ಪಡೆದುಕೊಂಡಿದ್ದಾರೆ. 2010-14ರ ಸಾಲಿನಲ್ಲಿ ಕೇವಲ 11 ಲಕ್ಷ ಜನ ಸಾಲ ಪಡೆದುಕೊಂಡಿದ್ದರು ಎಂದ ಸಚಿವರು ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರ ಉದ್ಯೋಗ ಖಾತ್ರಿ ಯೋಜನೆಯಡಿ 2014-18ರ ಸಾಲಿನಲ್ಲಿ 2 ಲಕ್ಷ ಉದ್ಯಮಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ಈ ಮೂಲಕ ಈ ಯೋಜನೆಯಡಿ ಪ್ರಯೋಜನ ಪಡೆದುಕೊಂಡವರ ಸಂಖ್ಯೆ 20 ಲಕ್ಷಕ್ಕೆ ಏರಿದೆ ಎಂದಿದ್ದಾರೆ.
ಸಣ್ಣ ಮತ್ತು ಮದ್ಯಮ ಉದ್ದಿಮೆಗಳು ಸುಮಾರು 7 ಕೋಟಿ ಜನರಿಗೆ ಉದ್ಯೋಗವನ್ನು ನೀಡಿದೆ. ಸ್ಥಾಪನೆಯಾದ ಹೊಸ ಉದ್ಯಮಗಳಿಗೆ 3 ಕೋಟಿ ಜನರಿಗೆ ಉದ್ಯೋಗ ದೊರೆತಿದೆ. ಇದರಿಂದಾಗಿ ಒಟ್ಟಾರೆಯಾಗಿ 10 ಕೋಟಿ ಉದ್ಯೋಗಳು ಸೃಷ್ಟಿಯಾಗಿವೆ.
”20 ಲಕ್ಷ ಹೊಸ ಉದ್ಯಮಿಗಳು ಎದ್ದು ನಿಂತಿರುವಾಗ ಉದ್ಯೋಗ ಕೆಳಗಿಳಿಯಲು ಹೇಗೆ ಸಾಧ್ಯ? ಸುಳ್ಳನ್ನು ಪಸರಿಸಲೆಂದೇ ಕೆಲವರು ವರದಿ ಸಿದ್ಧಪಡಿಸುತ್ತಿದ್ದಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೇ” ಎಂದಿದ್ದಾರೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳು 10 ಕೋಟಿ ಉದ್ಯೋಗ ಸೃಷ್ಟಿಸಿವೆ ಎಂಬುದು ಬಾಯಿಯಿಂದ ಬಾಯಿಗೆ ಹರಡಿದ ವದಂತಿಯಲ್ಲ, ಸಮೀಕ್ಷೆಯನ್ನು ಆಧರಿಸಿ ನಾನು ಹೇಳುತ್ತಿರುವ ಸತ್ಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


			
