
ಮುಂಬಯಿ: ಮಹಾರಾಷ್ಟ್ರದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗೆ ಶಿವಸೇನಾ ಮತ್ತು ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಅಂತಿಮವಾಗಿದೆ. ಸಿಎಂ ದೇವೇಂದ್ರ ಫಡ್ನವಿಸ್ ಅವರು ಸೋಮವಾರ ಮೈತ್ರಿಯ ಬಗ್ಗೆ ಅಧಿಕೃತ ಪ್ರಕಟನೆಯನ್ನು ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಶಿವಸೇನಾ 23 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಫಡ್ನವಿಸ್ ಅವರು, ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ, ಶಿವಸೇನೆ 23 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಈ ನಿರ್ಧಾರವನ್ನು ರಾಷ್ಟ್ರದ ಹಿತಕ್ಕಾಗಿ ತೆಗೆದುಕೊಂಡಿದ್ದೇವೆ ಮತ್ತು 2019ರಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದಿದ್ದಾರೆ.
’ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣ ಮಾಡುವಂತೆ ಉದ್ಧವ್ ಠಾಕ್ರೆಯವರ ಬೇಡಿಕೆಯನ್ನು ಬಿಜೆಪಿ ಸಂಪೂರ್ಣವಾಗಿ ಬೆಂಬಲಿಸುತ್ತದೆ. ದೇಗುಲ ಮಂಡಳಿಯ 67 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಸಿದ್ದೇವೆ’ ಎಂದಿದ್ದಾರೆ.
ಮೈತ್ರಿಯ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ‘ಕಳೆದ 30 ವರ್ಷಗಳಿಂದ ಜನರು ಬಿಜೆಪಿ ಮತ್ತು ಶಿವಸೇನೆಯನ್ನು ನೋಡುತ್ತಿದ್ದಾರೆ. 25 ವರ್ಷಗಳೀಂದ ನಾವು ಒಂದಾಗಿದ್ದೇವೆ ಮತ್ತು 5 ವರ್ಷಗಳ ಕಾಲ ಗೊಂದಲದಲ್ಲಿದ್ದೆವು. ಆದರೆ ಸಿಎಂ ಆಗಿ, ನನಗೆ ಸರ್ಕಾರದ ಬಗ್ಗೆ ಕ್ಷಣ ಕ್ಷಣಕ್ಕೂ ಸಲಹೆಗಳು ಬರುತ್ತಿದ್ದವು’ ಎಂದಿದ್ದಾರೆ.
ಬಿಜೆಪಿ ಮತ್ತು ಶಿವಸೇನೆ ಒಂದಾಗಿ ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳ ಪೈಕಿ 45ನ್ನು ಗೆಲ್ಲುತ್ತದೆ ಎಂಬ ಬಗ್ಗೆ ನಮಗೆ ಭರವಸೆ ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



