
ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದನಾ ದಾಳಿ ನಡೆದು 100 ಗಂಟೆಗಳೊಳಗೆ, ಕಾಶ್ಮೀರದಲ್ಲಿ ಕಾರ್ಯಾಚರಿಸುತ್ತಿದೆ ಜೈಶೇ-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉನ್ನತ ನಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಮಂಗಳವಾರ ತಿಳಿಸಿದೆ.
ಸೇನೆ, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಮಂಗಳವಾರ ಜಂಟಿಯಾಗಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು, ಇದರಲ್ಲಿ ಚಿನಾರ್ ಕಾರ್ಪ್ಸ್ನ ಕಾರ್ಪ್ಸ್ ಕಮಾಂಡರ್ ಲೆ.ಜ.ಕನ್ವಲ್ ಜೀತ್ ಸಿಂಗ್ ದಿಲ್ಲಾನ್ ಮಾತನಾಡಿದರು.
ಪುಲ್ವಾಮ ದಾಳಿಯ ಬಳಿಕ ಕಾಶ್ಮೀರದಲ್ಲಿ, ಐಎಸ್ಐ ಮತ್ತು ಪಾಕಿಸ್ಥಾನಿ ಸೇನೆಯ ಬೆಂಬಲದೊಂದಿಗೆ ಕಾರ್ಯಾಚರಿಸುತ್ತಿರುವ ಜೈಶೇ ಉಗ್ರರ ಬೇಟಿ ಸಕ್ರಿಯವಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಾತ್ರವಲ್ಲ, ಜೈಶೇ ಸಂಘಟನೆ ಪಾಕ್ ಸೇನೆಯ ಅಣತಿಯಂತೆ ನಡೆದುಕೊಳ್ಳುತ್ತಿದೆ ಎಂದಿದ್ದಾರೆ.
ಉಗ್ರ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿರುವ ಸ್ಥಳಿಯರಿಗೆ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ಮಾತ್ರವಲ್ಲ, ತಾಯಂದಿರುವ ತಮ್ಮ ಮಕ್ಕಳು ಉಗ್ರರಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಎಚ್ಚರಿಕೆಯ ನಡುವೆಯೂ ಅವರು ಗನ್ಗಳನ್ನು ಕೈಗೆತ್ತಿಕೊಂಡರೆ, ಅವರನ್ನು ಹತ್ಯೆ ಮಾಡಲಾಗುತ್ತದೆ ಎಂದು ಕಟು ಸಂದೇಶವನ್ನು ರವಾನಿಸಿದ್ದಾರೆ. ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದವರು ಮುಂದೆ ಬಂದು ಶರಣಾಗಬೇಕು ಎಂದು ಹೇಳಿದ್ದಾರೆ.
‘ಇಂತಹ ದಾಳಿ ಹಲವು ಸಮಯದ ಬಳಿಕ ನಡೆದಿದೆ. ಸಿರಿಯಾ, ಇರಾಕ್ನಲ್ಲಿ ಬಳಸುವ ಮಾದರಿಯ ದಾಳಿ ಇದಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಮೂಲವನ್ನು ಪತ್ತೆ ಹಚ್ಚುತ್ತೇವೆ. ಅವರನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಎಲ್ಲಾ ಆಯ್ಕೆಗೂ ನಾವು ತೆರೆದುಕೊಂಡಿದ್ದೇವೆ’ ಎಂದಿದ್ದಾರೆ.
ನಾಗರಿಕರನ್ನು ಸಾವಿನಿಂದ ಕಾಪಾಡುವ ಸಲುವಾಗಿ ಎನ್ಕೌಂಟರ್ ನಡೆದ ಸಂದರ್ಭ ನಾಲ್ವರು ಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



