ನವದೆಹಲಿ: ಲಂಡನ್, ಭಾರತೀಯ ಹಣಕಾಸು ವಂಚಕರಿಗೆ ಸುರಕ್ಷಿತ ನೆಲೆಯನ್ನು ಕಲ್ಪಿಸುತ್ತಿದೆ. ಭಾರತದಿಂದ ಓಡಿ ಹೋಗಿರುವ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅಲ್ಲೇ ಠಿಕಾಣಿ ಹೂಡಿದ್ದಾರೆ. ಆದರೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಈಗಾಗಲೇ ಮಲ್ಯನನ್ನು ಭಾರತಕ್ಕೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿದೆ. ಇದೀಗ ನೀರವ್ ಮೋದಿ ಸರದಿ. ಈತನ ವಿರುದ್ಧ ಲಂಡನ್ನಲ್ಲಿ ಅರೆಸ್ಟ್ ವಾರೆಂಟ್ ಅನ್ನು ಜಾರಿಗೊಳಿಸಲಾಗಿದೆ.
ಲಂಡನ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ್ದು, ಆತನನ್ನು ಗಡಿಪಾರುಗೊಳಿಸುವ ಕಾನೂನು ಪ್ರಕ್ರಿಯೆಗೆ ಈ ಮೂಲಕ ಅಧಿಕೃತ ಚಾಲನೆಯನ್ನು ನೀಡಿದೆ. ಈ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ರವಾನಿಸಿದ್ದು, ನೀರವ್ ಆರ್ಥಿಕ ಅಪರಾಧಗಳಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಲಂಡನ್ಗೆ ತರುವಂತೆ ಸೂಚಿಸಿದೆ.
ನೀರವ್ ಮೋದಿ ವಜ್ರದ ವ್ಯಾಪಾರಿಯಾಗಿದ್ದು, ಹಣಕಾಸು ವಂಚನೆ, ಅಪ್ರಮಾಣಿಕತೆ ನಡೆಸಿದ್ದ ಹಿನ್ನಲೆಯಲ್ಲಿ ಇಂಟರ್ಪೋಲ್ಗೆ ಬೇಕಾಗಿದ್ದಾನೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಕೋಟ್ಯಂತರ ವಂಚಿಸಿದ ಆರೋಪ ಈತನ ಮೇಲಿದೆ.
ನೀರವ್ ವಿರುದ್ಧ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಶೀಘ್ರದಲ್ಲೇ ಲಂಡನ್ಗೆ ತೆರಳಿ ಆತನ ಮಹಾವಂಚನೆ ಮತ್ತು ಆರ್ಥಿಕ ಅಪರಾಧಗಳ ಬಗೆಗಿನ ಸಾಕ್ಷ್ಯಾಧಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಪತ್ರಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.
ಇವುಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ನೀರವ್ನನ್ನು ಬಂಧಿಸಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದೆ. ಆತನ ಬಂಧನವಾಗುವ ಸಾಧ್ಯತೆಯೂ ಇದೆ.
ತನ್ನ ಬಂಧನ ಖಚಿತ ಎಂಬುದು ತಿಳಿಯುತ್ತಿದ್ದಂತೆ ನೀರವ್ ಲಂಡನ್ನ ವಕೀಲರನ್ನು ಸಂಪರ್ಕಿಸಿ ಜಾಮೀನು ಪಡೆಯುವ ಯತ್ನ ಆರಂಭಿಸಿದ್ದಾನೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.