ನವದೆಹಲಿ: ಲೋಕಸಭಾ ಚುನಾವಣೆ ಆರಂಭವಾಗಲು ಇನ್ನು ಎರಡನೇ ದಿನಗಳು ಬಾಕಿ ಇದೆ. ಎಪ್ರಿಲ್ 11 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಕಾರ್ಯ ಇಂದು ಅಂತ್ಯವಾಗಲಿದೆ. ಪ್ರಧಾನಿ ಮೋದಿಯವರು ಮೂರು ರಾಜ್ಯಗಳಲ್ಲಿ ನಾಲ್ಕು ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಚಿತ್ರದುರ್ಗ ಮತ್ತು ಮೈಸೂರಿನಲ್ಲಿ, ಮಹಾರಾಷ್ಟ್ರದ ಲಾಥೂರಿನಲ್ಲಿ, ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
ಮೋದಿಯವರ ಸ್ವಾಗತಕ್ಕೆ ಕೋಟೆ ನಗರಿ ಚಿತ್ರದುರ್ಗ ಮತ್ತು ಸಾಂಸ್ಕೃತಿಕ ನಗರಿ ಮೈಸೂರು ಸರ್ವಸನ್ನದ್ಧವಾಗಿದೆ. ಬಿಜೆಪಿ ಘಟಕ ಸಮಾವೇಶಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಬಿಗಿ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.
ಲಾಥೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿಯವರು ಶೀವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆಯವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಚುನಾವಣೆಗೆ ಸ್ವಲ್ಪ ದಿನ ಮುಂಚಿತವಾಗಿ ಶಿವಸೇನೆ ಮತ್ತು ಬಿಜೆಪಿ ಪರಸ್ಪರ ಕೈಜೋಡಿಸಿವೆ.
ಲೋಕಸಭಾ ಚುನಾವಣೆ ಎಪ್ರಿಲ್ 11 ರಿಂದ ಮೇ 19 ರವರೆಗೆ 7 ಹಂತಗಳಲ್ಲಿ ನಡೆಯಲಿದೆ. ಫಲಿತಾಂಶ 23ರಂದು ಘೋಷಣೆಯಾಗಲಿದೆ.
ಮೊದಲ ಹಂತದ ಚುನಾವಣೆಯು 20 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರಗಳಲ್ಲಿ ಜರುಗಲಿದೆ.
ಮೋದಿಯವರು ಚುನಾವಣೆಯ ಹಿನ್ನಲೆಯಲ್ಲಿ ದೇಶದಾದ್ಯಂತ ಸಕ್ರಿಯವಾಗಿ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.