ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯ ಬೆಂಗಾವಲು ಪಡೆಯ ಮೇಲೆ ಸೋಮವಾರ ಕಲ್ಲು ತೂರಾಟವಾಗಿದೆ. ದಕ್ಷಿಣ ಕಾಶ್ಮೀರದ ಬಿಜ್ಬಿಹಾರದಲ್ಲಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಒರ್ವ ಪೊಲೀಸ್ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಖಿರಂ ಗ್ರಾಮದ ದರ್ಗಾವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವಾಹನಗಳು ಹಾನಿಗೊಳಗಾಗಿವೆ. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುರೆದು ಮುಫ್ತಿಗೆ ರಕ್ಷಣೆಯನ್ನು ನೀಡಿವೆ.
2008 ಮತ್ತು 2017ರ ನಡುವೆ ಆಕೆಯ ಸರ್ಕಾರ ಸುಮಾರು 9,730 ಕಲ್ಲು ತೂರಾಟಗಾರರ ವಿರುದ್ಧದ ಪ್ರಕರಣವನ್ನು ಹಿಂದಕ್ಕೆ ತೆಗೆದುಕೊಂಡಿತ್ತು. ಮಾತ್ರವಲ್ಲ, 4 ಸಾವಿರ ಸಣ್ಣ ಪುಟ್ಟ ಕಲ್ಲು ತೂರಾಟಗಾರರಿಗೆ ಕ್ಷಮಾಪಣೆಯನ್ನು ನೀಡಲಾಗಿದೆ. ಇದೀಗ ಮುಫ್ತಿಯ ಅವರ ಬೆಂಗಾವಲು ಪಡೆಯ ಮೇಲೆಯೇ ಕಲ್ಲು ತೂರಾಟ ನಡೆಯುತ್ತಿದೆ.
ಇತ್ತೀಚಿಗಷ್ಟೇ, ಕಲಂ 370 ತೆಗೆದು ಹಾಕಿದರೆ ಭಾರತೀಯ ಸೇನೆ ‘ವೃತ್ತಿಪರ ಪಡೆ’ಯಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದರು. ಇದೀಗ ಆ ಸೇನೆಯೇ ಅವರನ್ನು ಕಲ್ಲು ತೂರಾಟದಿಂದ ಪಾರು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.