ನವದೆಹಲಿ : ಮತ್ತೊಂದು ಬಾರಿಗೆ ಬಿಜೆಪಿ ಸರ್ಕಾರವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶತ ಪ್ರಯತ್ನವನ್ನು ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ಮೇ 1 ರಂದು ದೇಗುಲ ನಗರಿ ಅಯೋಧ್ಯಾದಲ್ಲಿ ಚುನಾವಣಾ ಸಮಾವೇಶವನ್ನು ಆಯೋಜನೆಗೊಳಿಸುತ್ತಿದ್ದಾರೆ.
ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯಾ ಹಿಂದೂಗಳಿಗೆ ಅತ್ಯಂತ ಪವಿತ್ರ ಕ್ಷೇತ್ರವೂ ಹೌದು. ಇಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವುದು ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಗುರಿಯೂ ಆಗಿದೆ. ಹೀಗಾಗಿ ಅಲ್ಲಿ ಮೋದಿಯವರು ನಡೆಸುತ್ತಿರುವ ಸಮಾವೇಶ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ಉತ್ತರಪ್ರದೇಶದ ಫೈಝಾಬಾದ್ ಲೋಕಸಭಾ ಕ್ಷೇತ್ರದಡಿ ಅಯೋಧ್ಯಾ ಬರುತ್ತದೆ. ಇದು ಮೇ 6 ರಂದು ಆರನೇ ಹಂತದ ಮತದಾನವನ್ನು ಎದುರಿಸಲಿದೆ. ಮೇ 23 ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಈಗಾಗಲೇ ಪ್ರಧಾನಿ ಮೋದಿಯವರು ದೇಶದ ನಾನಾ ಭಾಗಗಳಲ್ಲಿ ಸಮಾವೇಶವನ್ನು ಆಯೋಜನೆಗೊಳಿಸಿದ್ದು, ಭಾರೀ ಜನ ಬೆಂಬಲ ಅವರಿಗೆ ವ್ಯಕ್ತವಾಗಿದೆ. ದೇಶದ ಬಹುತೇಕ ಸಮೀಕ್ಷೆಗಳೂ ಮೋದಿ ಸರ್ಕಾರ ಮತ್ತೊಮ್ಮೆ ರಚನೆಯಾಗಲಿದೆ ಎಂಬ ಬಗ್ಗೆ ಸುಳಿವು ನೀಡಿದೆ.
ಈಗಾಗಲೇ 3 ಹಂತದ ಮತದಾನಗಳು ಪೂರ್ಣಗೊಂಡಿದ್ದು, ಇನ್ನೂ ನಾಲ್ಕು ಹಂತಗಳು ಬಾಕಿ ಇವೆ. ಮೇ 19 ರಂದು ಕೊನೆಯ ಮತ್ತು 7 ನೇ ಹಂತದ ಚುನಾವಣೆ ನಡೆಯಲಿದೆ. ಎಲ್ಲಾ ಕಡೆಯೂ ಒಂದೇ ದಿನ ಮೇ 23 ರಂದು ಫಲಿತಾಂಶ ಘೋಷಣೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.