ನವದೆಹಲಿ : ಇಂದು ಸೇನಾಪಡೆಯ ಏಳು ಮಂದಿ ಮಾಜಿ ಯೋಧರು ದೆಹಲಿಯ ಕೇಂದ್ರ ಕಛೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆತ್ಮೀಯವಾಗಿ ಬರಮಾಡಿಕೊಂಡರು.
ಮಾಜಿ ಲೆಫ್ಟಿನೆಂಟ್ ಜನರಲ್ ಜೆಬಿಎಸ್ ಯಾದವ್, ಲೆಫ್ಟಿನೆಂಟ್ ಜನರಲ್ ಆರ್ ಎನ್ ಸಿಂಗ್, ಲೆಫ್ಟಿನೆಂಟ್ ಜನರಲ್ ಎಸ್ ಕೆ ಪಟ್ಯಾಳ್, ಲೆಫ್ಟಿನೆಂಟ್ ಜನರಲ್ ಸುನಿತ್ ಕುಮಾರ್, ಲೆಫ್ಟಿನೆಂಟ್ ಜನರಲ್ ನಿತಿನ್ ಕೊಹ್ಲಿ, ಕರ್ನಲ್ ಆರ್ ಕೆ ತ್ರಿಪಾಠಿ ಮತ್ತು ವಿಂಗ್ ಕಮಾಂಡರ್ ನವನೀತ್ ಮಗೋನ್ ಅವರು ಬಿಜೆಪಿ ಸೇರಿದ ಮಾಜಿ ಯೋಧರಾಗಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ” ಸೇನಾ ಪಡೆಗಳ ಗೌರವಾನ್ವಿತ ಮಾಜಿ ಅಧಿಕಾರಿಗಳನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತ ಮಾಡಿರುವುದು ನಮಗೆ ಹೆಮ್ಮೆ ತಂದಿದೆ. ಅವರು ಗೌರವಾನ್ವಿತರು ಮಾತ್ರವಲ್ಲ, ಸೂಕ್ಷ್ಮ ಮತ್ತು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದವರು ಕೂಡ ಆಗಿದ್ದಾರೆ. ಅತ್ಯಂತ ಧೈರ್ಯಶಾಲಿಗಳು ಮತ್ತು ಉತ್ತಮ ಶೈಕ್ಷಣಿಕ ಹಿನ್ನೆಲೆಯನ್ನೂ ಹೊಂದಿದ್ದಾರೆ” ಎಂದಿದ್ದಾರೆ.
“ಎಲ್ಲಾ ಹಿರಿಯ ಸೈನಿಕರ ಪ್ರಸ್ತುತತೆಯಿಂದ ಬಿಜೆಪಿಗೆ ಪ್ರಯೋಜನವಾಗಲಿದೆ. ಅವರು ನಮ್ಮನ್ನು ಸೇರ್ಪಡೆಗೊಂಡಿರುವುದಕ್ಕೆ ಬಿಜೆಪಿ ಅವರಿಗೆ ಅಭಾರಿಯಾಗಿದೆ. ರಾಷ್ಟ್ರೀಯ ಭದ್ರತಾ ನಿರ್ಮಾಣ ಕಾರ್ಯ, ಕಾರ್ಯತಾಂತ್ರಿಕ ವಿಚಾರ ಮುಂತಾದವುಗಳಲ್ಲಿ ಅವರು ನಮಗೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಪ್ರತಿಯೊಬ್ಬರೂ ದೇಶಕ್ಕೆ ಉನ್ನತ ಸೇವೆಯನ್ನು ಸಲ್ಲಿಸಿದವರಾಗಿದ್ದು, ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.
ಬಿಜೆಪಿ ಸೇರಿರುವ ಏಳು ಮಂದಿಯಲ್ಲಿ ಒಬ್ಬರಾದ ಲೆಫ್ಟಿನೆಂಟ್ ಜನರಲ್ ಜೆ ಬಿ ಎಸ್ ಯಾದವ್ ಅವರು ಮಾತನಾಡಿ ನಮ್ಮನ್ನು ಪಕ್ಷದ ಸದಸ್ಯರನ್ನಾಗಿಸಿ ಗೌರವ ನೀಡಿದ ಬಿಜೆಪಿ ಮತ್ತು ಅದರ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದಿದ್ದಾರೆ.
“ಪ್ರತಿಯೊಬ್ಬ ಮನುಷ್ಯನಿಗೂ ರಾಜಕೀಯ ಸ್ವಾತಂತ್ರ್ಯವನ್ನು ಹೊಂದುವ ಹಕ್ಕಿದೆ. ನಮ್ಮ ದೇಶ ಇಂದು ಪ್ರಮುಖ ಘಟ್ಟದಲ್ಲಿದೆ ಮತ್ತು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದೆ. ನಮ್ಮಂತಹ ನಿವೃತ್ತ ಸೈನಿಕರಿಗೆ ರಾಷ್ಟ್ರಕ್ಕಾಗಿ ದುಡಿಯುವ ಮತ್ತು ರಾಜಕೀಯ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಮಯ ಈಗ ಬಂದಿದೆ” ಎಂದಿದ್ದಾರೆ.
“ನಮಗೆ ನಮ್ಮ ಕುಟುಂಬಕ್ಕಿಂತ ದೇಶ ಯಾವತ್ತೂ ಪ್ರಥಮ ಆದ್ಯತೆಯಾಗಿರುತ್ತದೆ. ನಮ್ಮ ಪ್ರಧಾನಿಗಳು ಮತ್ತು ಅವರ ಸಚಿವರುಗಳು ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಉದಾಹರಣೆಗೆ, 2 ರಕ್ಷಣಾ ಕಾರಿಡಾರ್ಗಳನ್ನು ಸ್ಥಾಪನೆ ಮಾಡಲಾಗಿದೆ. ಶಸ್ತ್ರಾಸ್ತ್ರ, ರಕ್ಷಣಾ ಪರಿಕರಗಳ ತಯಾರಿಕೆಗೆ ಒತ್ತು ನೀಡಲಾಗಿದೆ. ಡಿಆರ್ಡಿಓ, ಆರ್ಡಿಯನ್ಸ್ ಫ್ಯಾಕ್ಟರಿ ಬೋರ್ಡ್ ಮತ್ತು ಖಾಸಗಿ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನವನ್ನು ನೀಡಲಾಗಿದೆ” ಎಂದರು.
“ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದಾಗಿ ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ” ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.