ವಾರಣಾಸಿ: ಉತ್ತರಪ್ರದೇಶದ ವಾರಣಾಸಿ ಸಮೀಪದ ಗ್ರಾಮವೊಂದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಮ್ಮ ಗ್ರಾಮಕ್ಕೆ ಪ್ರವೇಶವಿಲ್ಲ ಎಂಬ ಪೋಸ್ಟರ್ಗಳನ್ನು ಹಾಕಿದೆ. ‘ಇದು ಚೌಕಿದಾರ್ಗಳ ಗ್ರಾಮವಾಗಿದೆ, ಇಲ್ಲಿಗೆ ನಿಮಗೆ ಪ್ರವೇಶವಿಲ್ಲ’ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.
ರಾಹುಲ್ ಗಾಂಧಿ ಅವರನ್ನು ನೇರವಾಗಿ ಉದ್ದೇಶಿಸಿ ಈ ಪೋಸ್ಟರ್ ಅನ್ನು ಹಾಕಲಾಗಿದೆ. ಪದೇ ಪದೇ ಚೌಕಿದಾರ್ ಛೋರ್ ಎಂದು ಅವರು ಹೇಳುತ್ತಿರುವ ಹಿನ್ನಲೆಯಲ್ಲಿ ಈ ರೀತಿಯ ಪೋಸ್ಟರ್ ಅನ್ನು ಹಾಕಲಾಗಿದೆ.
“ಪ್ರಧಾನಿಯನ್ನು ಚೋರ್ ಎಂದು ಕರೆಯುತ್ತಿರುವುದರಿಂದ ದೇಶದ ಘನತೆಗೆ ಧಕ್ಕೆ ಬಂದಿದೆ, ಅಂತಹ ಜನರು ನಮ್ಮ ಗ್ರಾಮಕ್ಕೆ ಆಗಮಿಸುವುದನ್ನು ನಾವು ಇಷ್ಟಪಡುವುದಿಲ್ಲ. ಹೀಗಾಗಿ ನಾವು ಈ ಪೋಸ್ಟರ್ಗಳನ್ನು ಹಾಕಿದ್ದೇವೆ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರವೂ ಆಗಿರುವ ವಾರಣಾಸಿ ಮೇ 19 ರಂದು ಚುನಾವಣೆಯನ್ನು ಎದುರಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.