ನವದೆಹಲಿ: ಆಗಸ್ಟ್ 7 ರ ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವುದಾಗಿ ರಾಮ್ ನಾಥ್ ಕೋವಿಂದ್ ಅಧಿಕೃತವಾಗಿ ಘೋಷಿಸಿದ್ದಾರೆ. ಸಂಸತ್ತಿನ ಉಭಯ ಸದನಗಳು ಈ ನಿಟ್ಟಿನಲ್ಲಿ ನಿರ್ಣಯವನ್ನು ಅಂಗೀಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕಲಂ 370 ರದ್ಧತಿ ಅಧಿಸೂಚನೆಗೆ ಸಹಿ ಹಾಕಿದ್ದು, ಈ ಮೂಲಕ ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರ ಅಧಿಕೃತವಾಗಿ ರದ್ದುಗೊಂಡಿದೆ. ರಾಜ್ಯಸಭೆ ಮತ್ತು ಲೋಕಸಭೆ ಎರಡಲ್ಲೂ ಮಸೂದೆ ಅಂಗೀಕಾರಗೊಂಡ ಹಿನ್ನಲೆಯಲ್ಲಿ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ರಾಷ್ಟ್ರಪತಿಗಳ ಸಹಿಯುಳ್ಳ ಅಧಿಸೂಚನೆಯು, “ಭಾರತದ ಸಂವಿಧಾನದ 370 ನೇ ವಿಧಿಯಲ್ಲಿನ ಎಲ್ಲಾ ಅಂಶಗಳನ್ನು ತೆಗೆದು ಹಾಕಲಾಗಿದೆ. ಸಂವಿಧಾನದ ಎಲ್ಲಾ ನಿರ್ಬಂಧಗಳು, ಅಂಶಗಳು, ಕಾಲ ಕಾಲಕ್ಕೆ ಮಾಡುವ ತಿದ್ದುಪಡಿಗಳು, ಮಾರ್ಪಾಡುಗಳು ಯಾವುದೇ ವಿನಾಯಿತಿ ಇಲ್ಲದೇ ದೇಶದ ಎಲ್ಲಾ ಭಾಗಗಳಂತೆ ಜಮ್ಮು ಕಾಶ್ಮೀರಕ್ಕೂ ಅನ್ವಯವಾಗುತ್ತದೆ” ಎಂದು ಹೇಳಿದೆ.
ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಸಭೆಯಲ್ಲಿ 370 ನೇ ವಿಧಿ ತೆಗೆದು ಹಾಕುವ ಮಸೂದೆಯನ್ನು ಮಂಡಿಸಿ ಅದನ್ನು ಅಂಗೀಕಾರಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ಲೋಕಸಭೆಯಲ್ಲೂ ಮಸೂದ ಮಂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ್ದಾರೆ. ಹೀಗಾಗಿ ಮಸೂದೆ ಕಾಯ್ದೆಯಾಗಿ ಪರಿವರ್ತನೆಗೊಂದಿದ್ದು, ಅಧಿಕೃತವಾಗಿ ಜಮ್ಮು ಕಾಶ್ಮೀರ ವಿಶೇಷಾಧಿಕಾರವನ್ನು ಕಳೆದುಕೊಂಡಿದೆ.
ಜಮ್ಮು ಕಾಶ್ಮೀರ ವಿಧಾನಸಭೆಯುಳ್ಳು ಕೇಂದ್ರಾಡಳಿತ ಪ್ರದೇಶವಾಗಿ ಮತ್ತು ಲಡಾಖ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ದೇಶದಲ್ಲಿ ಅಸ್ತಿತ್ವಕ್ಕೆ ಬರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.