ಬೆಳ್ತಂಗಡಿ : ವಿದ್ಯಾರ್ಥಿ ಯಲ್ಲಾಲಿಂಗ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ, ಸಚಿವ ಶಿವರಾಜ್ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ರಾಜ್ಯಾದ್ಯಾಂತ ನಡೆಯುತ್ತಿರುವ ಪ್ರತಿಭಟನೆ ಪ್ರಯುಕ್ತ ಬೆಳ್ತಂಗಡಿ ತಾಲೂಕು ಕಚೇರಿ ಎದುರುಗಡೆ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯಾದ್ಯಾಂತ ವಿದ್ಯಾರ್ಥಿನಿಯರ ಮೇಲೆ ಸರಣಿ ಅತ್ಯಾಚಾರ, ಕೊಲೆ ಪ್ರಕರಣಗಳ ತನಿಖೆ ನೆನೆಗುದಿಗೆ ಬಿದ್ದಿದ್ದು ಹಾಗೂ ವಿದ್ಯಾರ್ಥಿ, ಸಾಮಾಜಿಕ ಕಾರ್ಯಕರ್ತ ಯಲ್ಲಾಲಿಂಗನ ಹತ್ಯೆ ಆರೋಪಿಗಳನ್ನು ಬಂಧಿಸದೆ ಇರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಬೆಳ್ತಂಗಡಿ, ಉಜಿರೆ, ಮಡಂತ್ಯಾರು ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು. ಈ ಸಂದರ್ಭ ತಾಲೂಕು ಸಂಚಾಲಕ ನಾಗೇಶ್ ಮದ್ವ, ಬೆಳ್ತಂಗಡಿ ನಗರ ಕಾರ್ಯದರ್ಶಿ ಸ್ವಸ್ತಿಕ್ ಎಂ.ಕೆ., ಉಜಿರೆ ನಗರ ಕಾರ್ಯದರ್ಶಿ ನಿಧೀಶ್ ಶೆಟ್ಟಿ, ಮಡಂತ್ಯಾರು ನಗರ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ನೇತೃತ್ವ ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.