ನವದೆಹಲಿ: ದೆಹಲಿ-ಕತ್ರಾ ಮಾರ್ಗದ ವಂದೇ ಭಾರತ್ ಎಕ್ಸ್ಪ್ರೆಸ್ ಇಂದಿನಿಂದ ತನ್ನ ವಾಣಿಜ್ಯ ಸಂಚಾರವನ್ನು ಆರಂಭಿಸುತ್ತಿದೆ. ಹೈಟೆಕ್ ಸೌಲಭ್ಯಗಳನ್ನು ಪ್ರಯಾಣಿಕರಿಗೆ ಒದಗಿಸಿರುವ ಈ ರೈಲು ದೆಹಲಿ ಮತ್ತು ಕತ್ರಾ ನಡುವಣ ಪ್ರಯಾಣವನ್ನು 8 ಗಂಟೆಗಳ ಕಾಲ ಕಡಿತಗೊಳಿಸಲಿದೆ. 655 ಕಿಮೀ ದೂರದ ಈ ಪ್ರಯಾಣಕ್ಕೆ ಪ್ರಸ್ತುತ ತಗಲುವ ಸಮಯ 12-14 ಗಂಟೆ. ವಂದೇ ಭಾರತ್ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸಲಿದೆ.
ಈ ರೈಲು ಮಂಗಳವಾರ ಹೊರತುಪಡಿಸಿ ಉಳಿದೆಲ್ಲಾ ದಿನ ಚಲಿಸಲಿದೆ. ವೈಷ್ಣೋ ದೇವಿ ಯಾತ್ರೆ ಕೈಗೊಳ್ಳುವವರಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯೋಜನಕಾರಿಯಾಗಿದೆ. ನವದೆಹಲಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 2 ಗಂಟೆಗೆ ಇದು ಕಾತ್ರ ತಲುಪಲಿದೆ. ಅದೇ ದಿನ, ಇದು ಕಾತ್ರದಿಂದ ಮಧ್ಯಾಹ್ನ 3 ಗಂಟೆಗೆ ಹಿಂದಿರುಗಲಿದೆ ಮತ್ತು ರಾತ್ರಿ 11 ಗಂಟೆಗೆ ರಾಷ್ಟ್ರ ರಾಜಧಾನಿಯನ್ನು ತಲುಪಲಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಉದ್ಘಾಟನಾ ಸಂಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆಯನ್ನು ನೀಡಿದ್ದಾರೆ.
ಈ ರೈಲು ಅಂಬಾಲಾ, ಲುಧಿಯಾನ ಮತ್ತು ಜಮ್ಮು ತಾವಿ ಮೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ನವದೆಹಲಿ ಮತ್ತು ವಾರಣಾಸಿ ನಡುವೆ ಚಲಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನ ಯಶಸ್ಸಿನ ನಂತರ ದೇಶೀಯವಾಗಿ ನಿರ್ಮಿಸಲಾದ ಹೈಸ್ಪೀಡ್ ರೈಲನ್ನು ದೆಹಲಿ-ಕಾತ್ರ ನಡುವೆ ಓಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.