ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುಂಚಿತವಾಗಿ ಕೇಂದ್ರ ಸಚಿವ ಸಂಪುಟ ಬುಧವಾರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಂಪರ್ ಕೊಡುಗೆಯನ್ನು ಘೋಷಣೆ ಮಾಡಿದೆ. ತುಟ್ಟಿ ಭತ್ಯೆಯನ್ನು ಶೇ 5 ರಷ್ಟು ಹೆಚ್ಚಳ ಮಾಡಲಾಗಿದೆ. ಇದೀಗ ತುಟ್ಟಿ ಭತ್ಯೆ ಶೇ.12ರಿಂದ ಶೇ.17ಕ್ಕೆ ಏರಿಕೆಯಾಗಿದೆ.
ಈ ನಿರ್ಧಾರವು ದೇಶದ ಸುಮಾರು 1.12 ಕೋಟಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡಲಿದೆ.
ಕೇಂದ್ರ ಸಚಿವ ಸಂಪುಟದ ಅನುಮೋದನೆಯ ಬಳಿಕ ಈ ನಿರ್ಧಾರವನ್ನು ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಘೋಷಣೆ ಮಾಡಿದ್ದಾರೆ. 2019ರ ಅಕ್ಟೋಬರ್ ತಿಂಗಳ ವೇತನದಲ್ಲಿ ತುಟ್ಟಿ ಭತ್ಯೆ ಹೆಚ್ಚಳದ ಪ್ರಯೋಜನ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ಈ ನಿರ್ಧಾರದಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸುಮಾರು 16,000 ಕೋಟಿ ರೂಪಾಯಿಗಳ ಹೊರೆ ಬೀಳಲಿದೆ.
7ನೇ ವೇತನಾ ಆಯೋಗದ ಶಿಫಾರಸ್ಸಿನಂತೆ ಈ ಹೆಚ್ಚಳವನ್ನು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.