ನವದೆಹಲಿ: ಭಾರತದ ಗುರುದಾಸ್ಪುರದ ಡೇರಾ ಬಾಬಾ ನಾನಕ್ ಸಾಹಿಬ್ ಮತ್ತು ಪಾಕಿಸ್ಥಾನದ ಕರ್ತಾರ್ಪುರದ ಗುರುದ್ವಾರ ದರ್ಬಾರ್ ಸಾಹಿಬ್ ಅನ್ನು ಸಂಪರ್ಕಿಸುವ 4.7 ಕಿಲೋಮೀಟರ್ ಉದ್ದದ ಬಹುನಿರೀಕ್ಷಿತ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಅನ್ನು ಇಂದು, ಗುರು ನಾನಕ್ ದೇವ್ ಅವರ 550ನೇ ಜನ್ಮ ವಾರ್ಷಿಕೋತ್ಸವದ ಮೂರು ದಿನಗಳಿಗೂ ಮುಂಚಿತವಾಗಿ ಔಪಚಾರಿಕವಾಗಿ ತೆರೆಯಲಾಗುತ್ತಿದೆ. ನವೆಂಬರ್ 12 ರಂದು ಸಿಖ್ ಧರ್ಮದ ಗುರುನಾನಕ್ ದೇವ್ ಅವರ ಜನ್ಮದಿನವಾಗಿದೆ.
6ನೇ ಶತಮಾನದ ಆರಂಭದಲ್ಲಿ ನಿಧನರಾದ ಗುರುನಾನಕ್ ದೇವ್ ಅವರ ಅಂತಿಮ ವಿಶ್ರಾಂತಿ ಸ್ಥಳಕ್ಕೆ ಭಾರತೀಯ ಯಾತ್ರಾರ್ಥಿಗಳಿಗೆ ಪ್ರವೇಶ ನೀಡುವ ಕಾರಿಡಾರ್ ಉದ್ಘಾಟನೆಗಾಗಿ ಭಾರತ ಮತ್ತು ಪಾಕಿಸ್ಥಾನವು ಗಡಿಯ ಎರಡೂ ಬದಿಯಲ್ಲಿ ಪ್ರತ್ಯೇಕ ಸಮಾರಂಭಗಳನ್ನು ನಡೆಸಲಿವೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಅವರ ಪತಿ ಮಾಜಿ ಪಂಜಾಬ್ ಉಪಮುಖ್ಯಮಂತ್ರಿ ಸುಖ್ಬೀರ್ ಬಾದಲ್ ಮತ್ತು ಹಲವಾರು ಮಂತ್ರಿಗಳು, ಶಾಸಕರು, ಸಂಸದರು ಸೇರಿದಂತೆ 500 ಭಾರತೀಯ ಯಾತ್ರಿಕರ ಮೊದಲ ಬ್ಯಾಚ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಕಾರ್ತಾರ್ಪುರಕ್ಕೆ ಕಳುಹಿಸಿಕೊಡಲಿದ್ದಾರೆ. ಇವರು ಕರ್ತಾರ್ಪುರ ಕಾರಿಡಾರ್ ಮೂಲಕ ಗುರುದ್ವಾರ ದರ್ಬಾರ್ ಸಾಹಿಬ್ಗೆ ಪ್ರಯಾಣಿಸಲಿದ್ದಾರೆ.
ಅಕಲ್ ತಖ್ತ್ನ ಜತೇದಾರ್ ಜಿಯಾನಿ ಹರ್ಪ್ರೀತ್ ಸಿಂಗ್ ಅವರು ಧಾರ್ಮಿಕ ಮುಖಂಡರಾಗಿ ಭಾರತೀಯ ನಿಯೋಗವನ್ನು ಮುನ್ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.