ಸಿಂಗಾಪುರ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಸಿಂಗಾಪುರದಲ್ಲಿ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಮತ್ತು ಇಂಡಿಯನ್ ನ್ಯಾಷನಲ್ ಆರ್ಮಿ(ಐಎನ್ಎ)ಯ ಇತರ ಯೋಧರ ಗೌರವಾರ್ಥ ಸ್ಥಾಪನೆ ಮಾಡಲಾದ ಐಎನ್ಎ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಕೆ ಮಾಡಿದರು.
ಎರಡು ದಿನಗಳ ಸಿಂಗಾಫುರ ಭೇಟಿಯಲ್ಲಿರುವ ರಾಜನಾಥ್ ಸಿಂಗ್ ಅವರು, ಐಎನ್ಎ ಸ್ಮಾರಕದಲ್ಲಿ ಇಂಡಿಯನ್ ನ್ಯಾಷನಲ್ ಆರ್ಮಿಯ ಮಾಜಿ ಮೇಜರ್ ಈಶ್ವರ್ ಲಾಲ್ ಅವರನ್ನೂ ಭೇಟಿಯಾಗಿ ಮಾತನಾಡಿದರು.
ಈ ಬಗ್ಗೆ ಟ್ವಿಟ್ ಮಾಡಿರುವ ರಾಜನಾಥ್ ಸಿಂಗ್, “ಸಿಂಗಾಫುರದಲ್ಲಿ ಐಎನ್ಎ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಸಂದರ್ಭ ಈಶ್ವರ್ ಲಾಲ್ ಅವರನ್ನು ಭೇಟಿಯಾಗಿ ಸಂತುಷ್ಟನಾದೆ. ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ನಾಯಕತ್ವದಲ್ಲಿ ಲಾಲ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿಗೆ ಸೇವೆ ಸಲ್ಲಿಸಿದ್ದಾರೆ. ಅವರು ಧೈರ್ಯ ಮತ್ತು ಸಾಹಸದ ಸಾಕಾರ ಮೂರ್ತಿ. ಅವರ ಸೇವೆ ಮತ್ತು ತ್ಯಾಗಕ್ಕೆ ನಮ್ಮ ಸೆಲ್ಯೂಟ್” ಎಂದಿದ್ದಾರೆ.
ಬ್ಯಾಂಕಾಕ್ ಪ್ರವಾಸವನ್ನು ಮುಕ್ತಾಯಗೊಳಿಸಿದ ಬಳಿಕ ರಾಜನಾಥ್ ಸಿಂಗ್ ಅವರು ಸೋಮವಾರ ಸಂಜೆ ಸಿಂಗಾಫುರಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿ ಅವರು ರಕ್ಷಣಾ ಸಚಿವರುಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಅಲ್ಲಿನ ಪ್ರಧಾನಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.