ಬೆಂಗಳೂರು: ತೆಲಂಗಾಣದಲ್ಲಿ ಕೆಲವು ದಿನಗಳ ಹಿಂದೆ ಪಶುವೈದ್ಯೆ ಮೇಲೆ ನಡೆದ ಭಯಾನಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬೆಂಗಳೂರು ಮೆಟ್ರೋ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮಹಿಳೆಯರು ಅದರಲ್ಲೂ ರಾತ್ರಿವೇಳೆ ಪ್ರಯಾಣ ಮಾಡುವ ಮಹಿಳೆಯರು ತಮ್ಮೊಂದಿಗೆ ಪೆಪ್ಪರ್ ಸ್ಪ್ರೇ ಒಯ್ಯಲು ಅನುಮತಿಯನ್ನು ನೀಡಿದೆ.
ಪೆಪ್ಪರ್ ಸ್ಪ್ರೇ ಹೊಂದುವುದು ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅತ್ಯಂತ ಅವಶ್ಯಕವಾಗಿರುತ್ತದೆ. ಕಠಿಣ ಸಂದರ್ಭಗಳಲ್ಲಿ ದುಷ್ಕರ್ಮಿಗಳಿಂದ ಬೆದರಿಕೆಗಳನ್ನು ಎದುರಿಸುವಂತಹ ಸಂದರ್ಭಗಳಲ್ಲಿ ಈ ಪೆಪ್ಪರ್ ಸ್ಪ್ರೇ ಅತ್ಯಂತ ಉಪಯೋಗಕ್ಕೆ ಬರುತ್ತದೆ.
ಕೆಲವು ನಿಲ್ದಾಣಗಳಲ್ಲಿ ಮಹಿಳೆಯರು ಪೆಪ್ಪರ್ ಸ್ಪ್ರೇ ಒಯ್ಯುವುದನ್ನು ಭದ್ರತಾ ಸಿಬ್ಬಂದಿಗಳು ತಡೆದಿದ್ದಾರೆ. ಈ ಬಗ್ಗೆ ಟ್ವಿಟರ್ ಮೂಲಕ ವ್ಯಕ್ತಿಯೊಬ್ಬರು ನಮ್ಮ ಮೆಟ್ರೋ ಆಡಳಿತಕ್ಕೆ ಪ್ರಶ್ನಿಸಿದ್ದರು. ಇದರಿಂದ ಎಚ್ಚೆತ್ತುಕೊಂಡಿರುವ ಮೆಟ್ರೋ ಆಡಳಿತವು ಮಹಿಳೆಯರಿಗೆ ಪೆಪ್ಪರ್ ಸ್ಪ್ರೇ ಗಳನ್ನು ಒಯ್ಯುಲು ಅವಕಾಶ ಮಾಡಿಕೊಡಬೇಕು ಎಂದು ತನ್ನ ಎಲ್ಲಾ ನಿಲ್ದಾಣಗಳಿಗೂ ಸೂಚನೆಯನ್ನು ರವಾನಿಸಿದೆ.
ಸಾರಿಗೆ ಏಜೆನ್ಸಿಗಳು ಮಹಿಳೆಯರಿಗೆ ಸುರಕ್ಷಿತ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಹಿಳಾ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವಂತಹ ಸಂಸ್ಥೆಗಳು ಮನವಿಯನ್ನು ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೋದ ಕ್ರಮ ಶ್ಲಾಘನೀಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.