ನವದೆಹಲಿ: ಆಗಸ್ಟ್ 5 ರಂದು 370ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ಅನ್ನು ಜಾರಿಗೊಳಿಸಿದ ನಂತರ ನಂತರ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 1947 ರಿಂದ 1954 ರವರೆಗೆ ಪಾಕಿಸ್ಥಾನಕ್ಕೆ ವಲಸೆ ಹೋದ ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದ 37 ವರ್ಷಗಳ ಹಳೆಯ ಕಾನೂನನ್ನು ರದ್ದುಗೊಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಪುನರ್ವಸತಿ ಕಾಯ್ದೆಯನ್ನು ರದ್ದುಗೊಳಿಸಲಾಗಿದೆ. ಇದು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಯಡಿ ರದ್ದುಪಡಿಸಿದ 153 ರಾಜ್ಯ ಕಾನೂನುಗಳು ಮತ್ತು ರಾಜ್ಯಪಾಲರ ಕಾಯ್ದೆಗಳಲ್ಲಿ ಒಂದಾಗಿದೆ.
“ಪುನರ್ವಸತಿ ಕಾಯ್ದೆಯನ್ನು ರದ್ದುಗೊಳಿಸಿದಾಗಿನಿಂದ ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಪಾಕಿಸ್ಥಾನದಿಂದ ಹಿಂದಿರುಗುವ ಬಾಗಿಲನ್ನು ಮುಚ್ಚಲಾಗಿದೆ ಮತ್ತು ಇದು ಈಗ ಮುಚ್ಚಿದ ಅಧ್ಯಾಯವಾಗಿದೆ” ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಅಬ್ದುರ್ ರಹೀಂ ರಾಥರ್ ಹೇಳಿದ್ದಾರೆ.
1980 ರಲ್ಲಿ ಈ ಮಸೂದೆಯನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಖಾಸಗಿ ಸದಸ್ಯರ ಮಸೂದೆಯಾಗಿ ಪರಿಚಯಿಸಲಾಯಿತು, ಇದನ್ನು ಬಿಜೆಪಿ, ಕಾಂಗ್ರೆಸ್, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಪ್ಯಾಂಥರ್ಸ್ ಪಾರ್ಟಿ (ಜೆ & ಕೆಎನ್ಪಿಪಿ), ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)ಗಳು ವಿರೋಧಿಸಿದ್ದವು.
ಆದರೆ ಎನ್ಸಿ ಪಕ್ಷ ಈ ಮಸೂದೆಯನ್ನು ಜಮ್ಮು ಮತ್ತು ಕಾಶ್ಮೀರ ಸಂವಿಧಾನದ 6ನೇ ಸೆಕ್ಷನ್ ಮತ್ತು ಭಾರತೀಯ ಸಂವಿಧಾನದ 7 ನೇ ವಿಧಿ ಮತ್ತು 1948 ರ ದೆಹಲಿ ಒಪ್ಪಂದದ ಎರಡನೆಯ ನಿಬಂಧನೆಯಡಿ ವಲಸಿಗರನ್ನು ಹಿಂದಿರುಗಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಾದಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.