ನವದೆಹಲಿ: ಈಶಾನ್ಯ ದೆಹಲಿಯ ಸೀಲಾಂಪುರ ಮತ್ತು ಜಫರಾಬಾದ್ ಪ್ರದೇಶಗಳಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದ ನಂತರ, ದೆಹಲಿ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುವ ಹಿನ್ನಲೆಯಲ್ಲಿ ಡ್ರೋನ್ಗಳನ್ನು ಕಣ್ಗಾವಲಿಗಾಗಿ ನಿಯೋಜಿಸಿದ್ದಾರೆ.
ವರದಿಗಳ ಪ್ರಕಾರ, ದೆಹಲಿ ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಭಾವ್ಯ ಗಲಭೆ ವಲಯಗಳನ್ನು ಗುರುತಿಸಲು ಡ್ರೋನ್ಗಳನ್ನು ಬಳಸುತ್ತಿದ್ದಾರೆ.
ಪೂರ್ವ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿಂತೆ ಹೊಸ ಪ್ರತಿಭಟನೆಗಳು ಭುಗಿಲೆದ್ದವು. ಪ್ರತಿಭಟನಾಕಾರರು ವಾಹನಗಳು, ಬಸ್ಸುಗಳಿಗೆ ಕಲ್ಲುಗಳನ್ನು ತೂರಿದ್ದಾರೆ. ಈ ಹಿನ್ನಲೆಯಲ್ಲಿ ಡ್ರೋನ್ಗಳನ್ನು ಬಳಸಿ ಪೊಲೀಸರು ಕಣ್ಗಾವಲನ್ನು ಇಟ್ಟಿದ್ದಾರೆ.
ಸಿಎಎ ಹೊಸದಾಗಿ ಜಾರಿಗೆ ಬಂದ ಕಾನೂನಾಗಿದ್ದು, ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ನಿರಾಶ್ರಿತ ಹಿಂದೂಗಳು, ಕ್ರಿಶ್ಚಿಯನ್ನರು, ಬೌದ್ಧರು, ಸಿಖ್ಖರು ಮತ್ತು ಜೈನರಿಗೆ ಪೌರತ್ವ ನೀಡಲು ಅವಕಾಶವನ್ನು ಇದು ಒದಗಿಸಿಕೊಡುತ್ತದೆ. ಆದರೆ ಕೆಲವರು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.