ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಅಭಾರ್ ಸಮಾವೇಶ’ವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸುಳ್ಳು ವದಂತಿಯನ್ನು ಹಬ್ಬಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಪೌರತ್ವ ತಿದ್ದುಪಡಿ ಮಸೂದೆಯ ಬಗ್ಗೆ ಸುಳ್ಳು ವದಂತಿಯನ್ನು ಹಬ್ಬಿಸಿ ಜನರ ದಾರಿ ತಪ್ಪಿಸುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮೂರು ದೇಶಗಳ ಧಾರ್ಮಿಕ ದೌರ್ಜನ್ಯವನ್ನು ಅನುಭವಿಸುತ್ತಿರುವ ಅಲ್ಪಸಂಖ್ಯಾತರಿಗಾಗಿ ತರಲಾಗಿದೆ. ಭರವಸೆಯಿಟ್ಟು ಭಾರತಕ್ಕೆ ಬಂದಿರುವವರಿಗಾಗಿ ತರಲಾಗಿದೆ. ಇದು ಪೌರತ್ವ ನೀಡುವ ಕಾಯ್ದೆಯೇ ಹೊರತು ಪೌರತ್ವ ಕಸಿದುಕೊಳ್ಳುವ ಕಾಯ್ದೆಯಲ್ಲ. ಈ ಕಾಯ್ದೆಯಿಂದ ಹೊಸ ಶರಣಾರ್ಥಿಗಳಿಗೆ ಯಾವುದೇ ಲಾಭವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ಧಾರ್ಮಿಕ ದೌರ್ಜನ್ಯದ ಕಾರಣದಿಂದ ಭಾರತಕ್ಕೆ ಬಂದ ಜನರಿಗೆ ಸುರಕ್ಷತೆಯನ್ನು ನೀಡುವ ಸಲುವಾಗಿ ತರಲಾದ ಕಾಯ್ದೆ ಇದಾಗಿದೆ. ಈ ಜನರ ಮೇಲೆ ಕಾಂಗ್ರೆಸ್ ಮತ್ತು ಅದರ ಮಿತ್ರರಿಗೆ ಯಾಕೆ ಇಷ್ಟು ದ್ವೇಷ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ನನ್ನ ಸರ್ಕಾರ ಯಾವುದೇ ಯೋಜನೆಯನ್ನು ಧರ್ಮ ಕೇಳಿ ತಂದಿಲ್ಲ. ಬಡತನವನ್ನು ನೋಡಿ ಕೊಟ್ಟಿದ್ದೇವೆ. ಜಾತಿ, ಧರ್ಮಗಳ ದಾಖಲೆಯನ್ನು ನೀಡಿಲ್ಲ. ಹೀಗಿರುವಾಗ ನಮ್ಮ ವಿರುದ್ಧ ಯಾಕೆ ಸುಳ್ಳು ಹಬ್ಬಿಸಲಾಗುತ್ತಿದೆ.
ಪ್ರತಿಪಕ್ಷಗಳು, ಬುದ್ಧಿಜೀವಿಗಳು ಉಪದೇಶ ನೀಡಲು ಸಿದ್ಧರಿದ್ದಾರೆ, ಆದರೆ ಶಾಂತಿ ಕಾಪಾಡುವಂತೆ ಒಂದೇ ಒಂದು ಮಾತನ್ನು ಹೇಳುತ್ತಿಲ್ಲ. ಹಿಂಸೆಯನ್ನು ತಡೆಯಲು ಒಂದೇ ಒಂದು ಮಾತನ್ನು ಆಡಲು ಅವರು ಸಿದ್ಧರಿಲ್ಲ. ಅಂದರೆ ಇದರರ್ಥ ಅವರು ಹಿಂಸೆಗೆ, ಪೊಲೀಸರ ಮೇಲೆ ನಡೆಯುತ್ತಿರುವ ದಾಳಿಗೆ ತಮ್ಮ ಮೌನದಿಂದ ಸಹಮತವನ್ನು ತೋರಿಸುತ್ತಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.