ಪಣಜಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ವೇಳೆ ರೈಲ್ವೆ ಆಸ್ತಿಪಾಸ್ತಿಗೆ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮನವಿ ಮಾಡಿದ್ದಾರೆ. ಗೋವಾದ ಮಾರ್ಗಾವೊದಲ್ಲಿ ಮಾತನಾಡಿದ ವೇಳೆ ಗೋಯಲ್ ಈ ಹೇಳಿಕೆ ನೀಡಿದ್ದು, ಈ ಸಂದರ್ಭದಲ್ಲಿ ಅವರು ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
“ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಸಾರ್ವಜನಿಕ ಆಸ್ತಿಯನ್ನು ಗುರಿಯಾಗಿಸಿಕೊಂಡಿರುವುದು ದುರದೃಷ್ಟಕರ. ಇದು ಹಿಂಸಾಚಾರವನ್ನು ಪ್ರಚೋದಿಸುವ ಜನರ ಮನಸ್ಥಿತಿಯನ್ನು ಸಹ ತೋರಿಸುತ್ತದೆ” ಎಂದು ರೈಲ್ವೆ ಸಚಿವರು ಹೇಳಿದ್ದಾರೆ. “ನಾವು ಪೊಲೀಸ್ ಠಾಣೆಗಳಲ್ಲಿ ಅಗತ್ಯ ದೂರುಗಳನ್ನು ದಾಖಲಿಸಿದ್ದೇವೆ, ಹಿಂಸಾತ್ಮಕ ಘಟನೆಗಳು ಹೆಚ್ಚಾಗಿ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿವೆ. ಪಶ್ಚಿಮ ಬಂಗಾಳ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
“ಸಿಎಂ ಮಮತಾ ಬ್ಯಾನರ್ಜಿಗೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದ ಅವರು, ಪೌರತ್ವ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಅಂತಿಮವಾಗಿದೆ ಎಂದು ಹೇಳಿದ್ದಾರೆ.
“ದೇಶದ ಪ್ರಧಾನ ಮಂತ್ರಿ ಏನು ಹೇಳುತ್ತಾರೋ ಅದು ಕೊನೆಯ ಮಾತು ಎಂದು ನಾನು ಭಾವಿಸುತ್ತೇನೆ. ಪ್ರಧಾನಿ ಕಾಯ್ದೆಗೆ ಸಂಬಂಧಿಸಿದಂತೆ ಎಲ್ಲವನ್ನೂ ಸ್ಪಷ್ಟಪಡಿಸಿದ್ದಾರೆ. ಎನ್ಆರ್ಸಿಯ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ, ಕ್ಯಾಬಿನೆಟ್ನಲ್ಲೂ ಯಾವುದೇ ನಿರ್ಣಯವಾಗಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.