ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸೌಭಾಗ್ಯ ಯೋಜನೆಯಡಿ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ರಾಜೌರಿ ಜಿಲ್ಲೆಯ ಕುಗ್ರಾಮ ಪ್ರದೇಶಗಳಲ್ಲಿನ ಸುಮಾರು 20,000 ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ದೊರೆತಿದೆ ಎಂದು ಮೂಲಗಳು ತಿಳಿಸಿವೆ.
ಮೊದಲ ಬಾರಿಗೆ ತಮ್ಮ ಮನೆಗಳಲ್ಲಿ ವಿದ್ಯುತ್ ದೀಪಗಳನ್ನು ಕಾಣುತ್ತಿರುವ ಕುಟುಂಬಗಳು ಸಂತೋಷವನ್ನು ವ್ಯಕ್ತಪಡಿಸಿವೆ, ವಿದ್ಯುತ್ ಇಲ್ಲದೆ ತಾವು ಅನುಭವಿಸಿದ ಸಂಕಷ್ಟಗಳನ್ನು ವಿವರಿಸಿವೆ.
ಈ ಮಹತ್ವದ ಅಭಿವೃದ್ಧಿ ಕಾರ್ಯವನ್ನು ಶ್ಲಾಘಿಸಿದ ರಾಜೌರಿಯ ಸರಪಂಚ್ ಸಾಜಿದ್ ಪರ್ವೇವ್ ಅವರು, “ಜಿಲ್ಲೆಯಲ್ಲಿ ಸುಮಾರು 20,000 ಮನೆಗಳು ಎಂದೂ ವಿದ್ಯುತ್ ಸಂಪರ್ಕವನ್ನು ಹೊಂದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ವಿದ್ಯುತ್ ಸಂಪರ್ಕವನ್ನು ಸಾಧ್ಯವನ್ನಾಗಿಸಲಾಯಿತು. ನಾವು ಎಲ್ಲಾ ಮನೆಗಳಿಗೆ ಈಗ ವಿದ್ಯುತ್ ಒದಗಿಸಿದ್ದೇವೆ.” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಮತ್ತು ನಗರಗಳಾದ್ಯಂತ ಭಾರತದ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಉದ್ದೇಶದಿಂದ ಸೌಭಾಗ್ಯ ಯೋಜನೆಯನ್ನು 2017 ಸೆಪ್ಟೆಂಬರ್ 25 ರಂದು ಮೋದಿ ಅವರು ಪ್ರಾರಂಭಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.