ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಕೋಲ್ಕತ್ತಾ ಬಂದರಿಗೆ ಮರುನಾಮಕರಣವನ್ನು ಮಾಡಿದ್ದಾರೆ. ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೆಸರನ್ನು ಬಂದರಿಗೆ ಇಡಲಾಗಿದೆ.
ಕೋಲ್ಕತ್ತಾ ಪೋರ್ಟ್ ಟ್ರಸ್ಟ್ನ 150 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿಯವರು ಈ ಘೋಷಣೆಯನ್ನು ಮಾಡಿದ್ದಾರೆ.
“ಕೊಲ್ಕತ್ತಾ ಫೋರ್ಟ್ ಟ್ರಸ್ಟ್ ಅನ್ನು ಶ್ಯಾಮ್ ಪ್ರಸಾದ್ ಮುಖರ್ಜಿ ಪೋರ್ಟ್ ಎಂದು ಮರುನಾಮಕರಣ ಮಾಡುವುದಾಗಿ ನಾನು ಘೋಷಿಸುತ್ತೇನೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜೀವಂತ ದಂತಕಥೆಯಾಗಿದ್ದು, ಒಂದು ರಾಷ್ಟ್ರ ಮತ್ತು ಒಂದು ಸಂವಿಧಾನದ ಚಿಂತನೆಗಾಗಿ ಅವರು ಮುಂಚೂಣಿಯಲ್ಲಿ ನಿಂತು ಹೋರಾಡಿದರು. ದೇಶದ ಅಭಿವೃದ್ಧಿಗಾಗಿ ಶ್ರಮಿಸಿದರು” ಎಂದಿದ್ದಾರೆ.
“ಡಾಕ್ಟರ್ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರು ಸರಕಾರಕ್ಕೆ ರಾಜೀನಾಮೆಯನ್ನು ನೀಡಿದ್ದು ಮತ್ತು ಅವರುಗಳ ಸಲಹೆಗಳನ್ನು ಅನುಷ್ಠಾನಕ್ಕೆ ತಾರದೆ ಇರುವುದು ಈ ದೇಶದ ದುರಾದೃಷ್ಟ” ಎಂದರು.
ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮೋದಿ, ಮಧ್ಯವರ್ತಿಗಳಿಗೆ ಹಣ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅವರು ಯೋಜನೆಗಳನ್ನು ತಡೆಯುತ್ತಿದ್ದಾರೆ ಎಂದಿದ್ದಾರೆ.
ದೇಶದ ರೈತರ ಖಾತೆಗೆ 43 ಸಾವಿರ ಕೋಟಿ ರೂಪಾಯಿಗಳು ನೇರವಾಗಿ ವರ್ಗಾವಣೆಯಾಗಿದೆ ಎಂದ ಮೋದಿ, ಮಮತಾ ಬ್ಯಾನರ್ಜಿಯವರು ಆಯುಷ್ಮಾನ್ ಭಾರತ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿದರೆ ಪ್ರಯೋಜನವಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.