ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧಿಕೃತ ಕಛೇರಿ ಲೋಕ ಭವನದ ಬಳಿ ಸ್ಥಾಪನೆ ಮಾಡಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆ ಈಗ ಸೆಲ್ಫಿ ಸ್ಪಾಟ್ ಆಗಿದೆ.
ಸಿಎಂ ಆದಿತ್ಯನಾಥ್ ಅವರು ಈಗ ಪ್ರತಿ ಭಾನುವಾರ ಲೋಕ ಭವನದ ದ್ವಾರಗಳನ್ನು ಸಾಮಾನ್ಯ ಜನರಿಗೆ ಮುಕ್ತಗೊಳಿಸಿದ್ದಾರೆ, ಇದರ ನಂತರ ನೂರಾರು ಜನರು ವಾಜಪೇಯಿ ಅವರ 25 ಅಡಿ ಎತ್ತರದ ಪ್ರತಿಮೆಯನ್ನು ನೋಡಲು ಆಗಮಿಸುತ್ತಿದ್ದಾರೆ ಮತ್ತು ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದಾರೆ.
ಡಿಸೆಂಬರ್ 25 ರಂದು ವಾಜಪೇಯಿ ಅವರ ಜನ್ಮ ದಿನಾಚರಣೆಯಂದು ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು. ಇದನ್ನು ಜೈಪುರದ ರಾಜ್ ಕುಮಾರ್ ಅವರು ಕೆತ್ತಿದ್ದು, ಇದಕ್ಕೆ ಸುಮಾರು 95 ಲಕ್ಷ ರೂ.ವ್ಯಯವಾಗಿದೆ.
ಈ ನಡುವೆ, ರಾಜ್ಯ ಸರ್ಕಾರವು ಲೋಕ ಭವನದ ಭದ್ರತೆಯನ್ನು ಹೆಚ್ಚಿಸಿದೆ ಮತ್ತು ಪ್ರತಿಮೆಯನ್ನು ಸ್ಥಾಪಿಸಿದ ಮುಂಭಾಗದ ಗೇಟಿನಲ್ಲಿ 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಮೆಯನ್ನು ನೋಡಲು ಬರುವ ಪ್ರವಾಸಿಗರಿಗೆ ಲೋಕ ಭವನಕ್ಕೆ ಹೋಗಲು ಅವಕಾಶವಿರುವುದಿಲ್ಲ ಮತ್ತು ಕಟ್ಟದ ಕಟ್ಟಡದ ದ್ವಾರಗಳನ್ನು ಪ್ರವೇಶಿಸುವ ಮೊದಲು ಎಲ್ಲಾ ಸಂದರ್ಶಕರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತದೆ.
ಪ್ರತಿ ಸಂದರ್ಶಕರ ವಿವರಗಳನ್ನು ರಿಜಿಸ್ಟರ್ನಲ್ಲಿ ದಾಖಲಿಸಲಾಗುತ್ತದೆ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಸಂದರ್ಶಕರ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.