ನವದೆಹಲಿ: ದೆಹಲಿಯಲ್ಲಿ ಬಿಜೆಪಿಯು ಸರ್ಕಾರ ರಚಿಸಿದ ಕೂಡಲೇ “ರಾಷ್ಟ್ರ ವಿರೋಧಿ” ಘೋಷಣೆಗಳನ್ನು ಎತ್ತಿದ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ತನಿಖೆಯನ್ನು ಪ್ರಾರಂಭಿಸುವುದಾಗಿ ತೇಜೆಂದರ್ ಬಗ್ಗಾ ಹೇಳಿಕೊಂಡಿದ್ದಾರೆ. ದೆಹಲಿ ಸಿಎಂ ಕೇಜ್ರಿವಾಲ್ ಅವರು ನಿರ್ಲಕ್ಷ್ಯ ಮಾಡಿರುವ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದಾರೆ.
ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದ ಹರಿ ನಗರದಿಂದ ಮುಂಬರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತಾಜಿಂದರ್ ಬಗ್ಗಾ ಹೆಸರನ್ನು ಘೋಷಣೆ ಮಾಡಲಾಗಿದೆ.
ಫೆಬ್ರವರಿ 9, 2016 ರಂದು ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಆಗಿನ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು, ಈ ಕಾರ್ಯಕ್ರಮದಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಎತ್ತಲಾಗಿತ್ತು. ದೇಶದ್ರೋಹ ಪ್ರಕರಣದಲ್ಲಿ ಕನ್ಹಯ್ಯ ಕುಮಾರ್ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಎಎಪಿ ಸರ್ಕಾರ ಅನುಮತಿ ನೀಡಿಲ್ಲ. ಈ ಪ್ರಕರಣದಲ್ಲಿ ಚಾರ್ಜ್ಶೀಟ್ ಅನ್ನು ಪೊಲೀಸರು 2019 ರ ಜನವರಿಯಲ್ಲಿ ಸಲ್ಲಿಸಿದ್ದರು. ಸುದ್ದಿ ವಾಹಿನಿಗಳು ಈ ಘೋಷಣೆಗಳನ್ನು ಎತ್ತಿದ ವೀಡಿಯೊಗಳನ್ನು ಪ್ರಸಾರ ಮಾಡಿದ್ದರೂ ಕೂಡ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು.
“ನೇತಾ ನಹಿ, ಬೇಟಾ (ನಾನು ಒಬ್ಬ ಮಗ, ನಾಯಕನಲ್ಲ)” ಎಂದು ಹೇಳುವ ಪೋಸ್ಟರ್ ಅನ್ನು ಬಗ್ಗಾ ಬಿಡುಗಡೆ ಮಾಡಿದ್ದಾರೆ, ಇದು ಅವರ ಪ್ರಚಾರ ಘೋಷಣೆಯಾಗಿದೆ, ಎಎಪಿ ತನ್ನ ಎರಡು ಬಾರಿ ಶಾಸಕ ಜಗದೀಪ್ ಸಿಂಗ್ ಬದಲಿಗೆ ಹರಿ ನಗರದಿಂದ ಬಗ್ಗಾ ವಿರುದ್ಧ ಹೋರಾಡಲು ರಾಜ್ ಕುಮಾರಿ ಧಿಲ್ಲೋನ್ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಒಟ್ಟು 1,74,463 ಮತದಾರರಿದ್ದು, 92,731 ಪುರುಷರು ಮತ್ತು 81,726 ಮಹಿಳಾ ಮತದಾರರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.