ನವದೆಹಲಿ: ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿ ಸಣ್ಣ ನಗರಗಳು ಮತ್ತು ಪಟ್ಟಣಗಳಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ಸಲುವಾಗಿ ಸರ್ಕಾರಿ ಸ್ವಾಮ್ಯದ ಮತ್ತು ಭಾರತೀಯ ರೈಲ್ವೇ ನಡೆಸುವ ಆಸ್ಪತ್ರೆಗಳನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ ಎಂದು ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಎಲ್ಲಾ ಸಚಿವಾಲಯಗಳ ಕಾರ್ಯದರ್ಶಿಗಳು, ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಅವರಿಗೆ ನವೆಂಬರ್ 1 ರಂದು ಪತ್ರ ಬರೆದಿದ್ದಾರೆ. “ವ್ಯಾಪ್ತಿಯನ್ನು ವಿಸ್ತರಣೆ ಮಾಡುವ ಸಲುವಾಗಿ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳನ್ನು ಎಬಿ-ಪಿಎಂಜೆಎ (ಆಯುಷ್ಮಾನ್ ಭಾರತ್-ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ)ಯ ಅಡಿಯಲ್ಲಿ ಎಂಪನೇಲ್ ಮಾಡಬೇಕೆಂದು ತಿಳಿಸಿದ್ದಾರೆ” ಎಂದು ಗೌಬಾ ಪತ್ರದಲ್ಲಿ ತಿಳಿಸಿದ್ದಾರೆ.
ನೀತಿ ಆಯೋಗದ ಸಲಹೆಗಾರ ಅಲೋಕ್ ಕುಮಾರ್ ಅವರು ನವೆಂಬರಿನಲ್ಲಿ ನಡೆದ ಉದ್ಯಮ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಕಾರ್ಯಕ್ರಮವು ಸಣ್ಣ ನಗರಗಳಲ್ಲಿನ ಹಲವಾರು ಆಸ್ಪತ್ರೆಗಳು, ಸರ್ಕಾರಿ ಉದ್ಯಮಗಳು ನಡೆಸುವ ಆಸ್ಪತ್ರೆಗಳಲ್ಲಿ ಕಡಿಮೆ ಬಳಕೆಯಾಗುತ್ತಿವೆ, ಈ ಪ್ರದೇಶಗಳಲ್ಲಿ ಅದರ ಸೇವೆಗಳಿಗೆ ಬಲವಾದ ಬೇಡಿಕೆಯಿದ್ದರೂ ಸಹ ಅದು ತಲುಪುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.
236 ಆಸ್ಪತ್ರೆಗಳು ಆರೋಗ್ಯ ವಿಮಾ ಯೋಜನೆಯಡಿ ತಮ್ಮನ್ನು ಎಂಪನೇಲ್ ಮಾಡಿಕೊಂಡಿವೆ, ಇದನ್ನು ಅಧಿಕೃತವಾಗಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಎಂದು ಕರೆಯಲಾಗುತ್ತದೆ, ಆದರೆ ಇನ್ನೂ 700 ಕ್ಕೂ ಹೆಚ್ಚು ಯೋಜನೆಗಳು ಈ ಯೋಜನೆಗೆ ಸೇರಲು ಮಾತುಕತೆ ನಡೆಸುತ್ತಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.