ನವದೆಹಲಿ: ದೇಶದಾದ್ಯಂತದ ಸಣ್ಣ ನಗರಗಳು ಮತ್ತು ಪಟ್ಟಣಗಳಲ್ಲಿ ಖಾದಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು (ಕೆವಿಐಸಿ) 2019-20ರ ಆರ್ಥಿಕ ವರ್ಷದಲ್ಲಿ 5,000 ಕೋಟಿ ರೂಪಾಯಿಗಳ ವಹಿವಾಟು ಅನ್ನು ನಿರೀಕ್ಷಿಸುತ್ತಿದೆ, ಇದು ಹಿಂದಿನ ವರ್ಷದ 1,800 ಕೋಟಿ ರೂಪಾಯಿಗಿಂತ ಇದು ರೂ.3,215 ಕೋಟಿಯಷ್ಟು ಹೆಚ್ಚಳವನ್ನು ಕಂಡಿದೆ.
“ಕಳೆದ ವರ್ಷ ಖಾದಿಯಲ್ಲಿ ನಮ್ಮ ವಹಿವಾಟು 3215 ಕೋಟಿ ರೂಪಾಯಿ, ಈ ವರ್ಷ (ಹಣಕಾಸು ವರ್ಷ 2019-20) 5000 ಕೋಟಿ ರೂಪಾಯಿಗಳ ವಹಿವಾಟು ನಿರೀಕ್ಷಿಸಲಾಗಿದೆ ”ಎಂದು ಕೆವಿಐಸಿ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೇನಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಸಣ್ಣ ಕೇಂದ್ರಗಳಲ್ಲಿ ಖಾದಿ ಉತ್ಪನ್ನಗಳ ಬೇಡಿಕೆ ಹೆಚ್ಚುತ್ತಿರುವ ಕಾರಣ ಮತ್ತು ಇತ್ತೀಚಿನ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಹೆಚ್ಚು ಉತ್ತೇಜನ ಸಿಗುತ್ತಿರುವ ಹಿನ್ನಲೆಯಲ್ಲಿ ಖಾದಿಯಲ್ಲಿ ದಾಖಲೆಯ ವಹಿವಾಟು ನಿರೀಕ್ಷಿಸಲಾಗಿದೆ ಎಂದು ಸಕ್ಸೇನಾ ಹೇಳಿದ್ದಾರೆ.
ಖಾದಿ ಉತ್ಪನ್ನಗಳ ಬೇಡಿಕೆ ಮತ್ತು ಜನಪ್ರಿಯತೆಯು ದೆಹಲಿಯಂತಹ ದೊಡ್ಡ ನಗರ ಕೇಂದ್ರಗಳಲ್ಲಿ ಮಾತ್ರವಲ್ಲದೆ ದೇಶದಾದ್ಯಂತದ ಸಣ್ಣ ನಗರಗಳು ಮತ್ತು ಪಟ್ಟಣಗಳಲ್ಲಿಯೂ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತದ ಖಾದಿ ಇಂಡಿಯಾ ಮಳಿಗೆಗಳ ಸಂಖ್ಯೆಯು ಹೆಚ್ಚಾಗುತ್ತಿರುವುದು ಉತ್ಪನ್ನಗಳ ಜನಪ್ರಿಯತೆಯನ್ನು ತೋರಿಸುತ್ತದೆ ಎಂದಿದ್ದಾರೆ.
“ದೇಶಾದ್ಯಂತ 8070 ಖಾದಿ ಇಂಡಿಯಾ ಮಳಿಗೆಗಳನ್ನು ತೆರೆಯಲಾಗಿದೆ. ಈ ಪೈಕಿ ಕಳೆದ ಎರಡು ವರ್ಷಗಳಲ್ಲಿ ದೇಶಾದ್ಯಂತ 2000 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ” ಎಂದು ಸಕ್ಸೇನಾ ಹೇಳಿದ್ದಾರೆ. 2000 ಕ್ಕೂ ಹೆಚ್ಚು‘ಖಾದಿ ಭಂಡಾರ’ಗಳನ್ನು ಸಹ ನವೀಕರಿಸಲಾಗಿದೆ ಎಂದಿದ್ದಾರೆ.
ಅರೆಸೈನಿಕ ಪಡೆಗಳಿಗೂ ಉತ್ಪನ್ನಗಳನ್ನು ನಾವು ಅಭಿವೃದ್ಧಿಪಡಿಸಿದ್ದೇವೆ ಎಂದು ಕೆವಿಐಸಿ ಅಧ್ಯಕ್ಷರು ಹೇಳಿದ್ದಾರೆ.
“ಖಾದಿ ಉತ್ಪನ್ನಗಳ ಮಾರಾಟವನ್ನು ಹೆಚ್ಚಿಸಲು ನಾವು ಎಲ್ಲೆಡೆ ನಮ್ಮ ವ್ಯಾಪ್ತಿಯನ್ನು ವೃದ್ಧಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಸಕ್ಸೇನಾ ಹೇಳಿದ್ದಾರೆ
ಖಾದಿ ಉತ್ಪನ್ನಗಳ ಮಾರಾಟದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಈ ವಲಯದಲ್ಲಿ ಉದ್ಯೋಗಗಳೂ ಹೆಚ್ಚಾಗುತ್ತಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.