ತಿರುವನಂತಪುರಂ: ತೀವ್ರಗಾಮಿ ಎಸ್ಡಿಪಿಐ ಸಂಘಟನೆಯು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ದುರ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಅಸ್ಥಿರತೆ ಸೃಷ್ಟಿಸಲು ಹವಣಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಹೇಳಿದ್ದಾರೆ.
ಕೇರಳ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಎಸ್ಡಿಪಿಐನಂತಹ ತೀವ್ರಗಾಮಿ ಗುಂಪುಗಳು ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಗಳನ್ನು ಬಳಸಿಕೊಂಡು ಅಶಾಂತಿ, ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದಾರೆ.
“ಎಸ್ಡಿಪಿಐನಂತಹ ತೀವ್ರಗಾಮಿ ಗುಂಪುಗಳು ಸಿಎಎ ವಿರೋಧಿ ಪ್ರತಿಭಟನೆಗಳನ್ನು ಬಳಸಿಕೊಂಡು ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ರಾಜ್ಯ ಸರ್ಕಾರವು ಇದಕ್ಕೆ ಅನುವು ಮಾಡಿಕೊಡುವುದಿಲ್ಲ. ಪೊಲೀಸರು ಅಂತಹ ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ಕೋಮು ಸಂಘರ್ಷವನ್ನು ಉಂಟುಮಾಡುವ ಯಾವುದೇ ಪ್ರಯತ್ನಗಳ ವಿರುದ್ಧ ದೃಢವಾಗಿ ಹೋರಾಡುತ್ತೇವೆ” ಎಂದಿದ್ದಾರೆ.
ಸಿಎಎ ಪರ ಪ್ರತಿಭಟನಾಕಾರರ ಕೊಲೆ ಪ್ರಯತ್ನದ ಹಿಂದೆ 6 ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಇದ್ದಾರೆ ಎಂದು ಬೆಂಗಳೂರು ಪೊಲೀಸರು ಹೇಳಿದ ಕೆಲವೇ ದಿನಗಳ ಬಳಿಕ ಅವರ ಈ ಹೇಳಿಕೆ ಹೊರ ಬಂದಿದೆ. ಪಿಎಫ್ಐ ಮತ್ತು ಎಸ್ಡಿಪಿಐ ಎರಡನ್ನೂ ನಿಷೇಧಿಸುವ ಬೇಡಿಕೆಯನ್ನು ಬಿಜೆಪಿ ಮತ್ತೆ ಮುಂದಿಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.