ನವದೆಹಲಿ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಷೆ ಅವರು ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ಇಂದು ನವದೆಹಲಿಗೆ ಆಗಮಿಸಿದ್ದಾರೆ. ವ್ಯಾಪಾರ, ರಕ್ಷಣಾ ಮತ್ತು ಕಡಲ ಭದ್ರತಾ ಸಹಕಾರ ಕುರಿತು ಉನ್ನತ ಮಟ್ಟದ ಸಭೆಗಳಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜಪಕ್ಷೆ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಲಿದ್ದಾರೆ. 2019 ರ ನವೆಂಬರ್ನಲ್ಲಿ ಅವರ ಸಹೋದರ ಗೋತಬಯಾ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ರಾಜಪಕ್ಷೆ ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ.
ಜೈಶಂಕರ್ ಅವರೊಂದಿಗಿನ ಭೇಟಿಯನ್ನು ಫೆಬ್ರವರಿ 8ಕ್ಕೆ ನಿಗದಿಪಡಿಸಲಾಗಿದೆ, ನಂತರ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ವಿಧ್ಯುಕ್ತ ಸ್ವಾಗತ ನೀಡಲಿದ್ದಾರೆ.
ನಂತರ ಅವರು ರಾಜ್ ಘಾಟ್ಗೆ ತೆರಳಿ ಮಾಲಾರ್ಪಣೆ ಮಾಡಲಿದ್ದಾರೆ. ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿಯವರೊಂದಿಗೆ ಮಾತುಕತೆಯನ್ನು ನಡೆಸಲಿದ್ದಾರೆ. ಬಳಿಕ ರಾಷ್ಟ್ರಪತಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಫೆ. 9 ರಂದು ರಾಜಪಕ್ಷೆ ಅವರು ವಾರಣಾಸಿಗೆ ಪ್ರಯಾಣಿಸಿ ಕಾಶಿ ವಿಶ್ವನಾಥ ದೇಗುಲಕ್ಕೆ ಮತ್ತು ಸಾರನಾಥ ಬೌದ್ಧ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.
ಫೆ. 10 ರಂದು ಅವರು ಬೋಧಗಯಾಗೆ ತೆರಳಲಿದ್ದಾರೆ. ಅಲ್ಲಿ ಮಹಾಬೋಧಿ ದೇಗುಲಕ್ಕೆ ಭೇಟಿಕೊಡಲಿದ್ದಾರೆ. ಮಂಗಳವಾರ ಬೆಳಿಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಳಿಕ ಶ್ರೀಲಂಕಾಗೆ ವಾಪಾಸ್ಸಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.