ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಹಿಂಸಾಚಾರವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2020ರಲ್ಲಿ ಇಲ್ಲಿಯವರೆಗೆ ಸುಮಾರು ಶೇ.60ರಷ್ಟು ಕುಸಿದಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಈ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯ ಒಂದೇ ಒಂದು ನಿದರ್ಶನಗಳು ವರದಿಯಾಗಿಲ್ಲ. ಎನ್ಕೌಂಟರ್ ಸ್ಥಳಗಳಲ್ಲಿ ಅಥವಾ ಭಯೋತ್ಪಾದಕರು ಹತ್ಯೆಯಾದ ಸ್ಥಳದಲ್ಲಿ ಕಲ್ಲು ತೂರಾಟದ ಕೃತ್ಯಗಳು ನಡೆದಿಲ್ಲ ಎಂದಿದ್ದಾರೆ.
ಈ ಸಕಾರಾತ್ಮಕ ಬೆಳವಣಿಗೆಗಳ ಬಗ್ಗೆ ದಿಲ್ಬಾಗ್ ಸಿಂಗ್ ಅವರು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ ದೆಹಲಿಯಲ್ಲಿ ವಿವರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಇಂದಿನ ಭದ್ರತಾ ಸನ್ನಿವೇಶದ ಬಗ್ಗೆ ತಿಳಿಸಿದರು.
2020 ರಲ್ಲಿ ಇಲ್ಲಿಯವರೆಗೆ 24 ಉಗ್ರರನ್ನು ಸದೆ ಬಡಿಯಲಾಗಿದೆ, ಇದರಲ್ಲಿ 20 ಉಗ್ರರ ಹತ್ಯೆ ಮಾಡಲಾಗಿದೆ ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಸಿಂಗ್ ಅವರು ಸಚಿವರಿಗೆ ತಿಳಿಸಿದ್ದಾರೆ.
ಇದಲ್ಲದೆ, ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿರುವ 12 ಭಯೋತ್ಪಾದಕರನ್ನು ಮತ್ತು 43 ಭಯೋತ್ಪಾದನೆ ಜೊತೆ ಸಂಪರ್ಕ ಹೊಂದಿದವರನ್ನು ಬಂಧಿಸಲಾಗಿದೆ. ಅವರು ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮತ್ತ ಬೆಂಬಲವನ್ನು ನೀಡುತ್ತಿದ್ದರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.