ಬೆಂಗಳೂರು : ಪೂರ್ವ ಆಫ್ರಿಕಾ ರಾಷ್ಟ್ರವಾದ ಸೆನೆಗಲ್ನಲ್ಲಿ ಬಂಧಿತನಾಗಿರುವ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ರವಿ ಪೂಜಾರಿಯನ್ನು ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಭಾರತಕ್ಕೆ ಕರೆತರಲಾಗಿದೆ. ಕೊಲೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈತ ಸುಮಾರು 200 ಪ್ರಕರಣಗಳಲ್ಲಿ ಭಾರತೀಯ ಪೊಲೀಸರಿಗೆ ಬೇಕಾಗಿದ್ದ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ತೆರಳಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಆತನನ್ನು ಬಂಧಿಸಿ ಕರೆ ತಂದಿದ್ದಾರೆ. ಇಂದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಎಪಿ) ಅಮರ್ ಕುಮಾರ್ ಪಾಂಡೆ ಅವರು ವರದಿಗಾರರಿಗೆ ಹೇಳಿದ್ದಾರೆ.
“ಆತ ದೈಹಿಕವಾಗಿ ಸದೃಢನಾಗಿದ್ದಾನೆ. ನಾಳೆಯಿಂದ ವಿಚಾರಣೆ ಪ್ರಾರಂಭವಾಗುತ್ತದೆ. ಮೊದಲು ನಾವು ಆತನನ್ನು ಮ್ಯಾಜಿಸ್ಟ್ರೇಟ್ಗೆ ಕರೆದೊಯ್ಯಬೇಕಾಗಿದೆ. ನಾಳೆ ಆತ ನಮ್ಮ ತನಿಖೆಗೆ ಸಹಕರಿಸಬೇಕಾಗಿದೆ ಮತ್ತು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ”ಎಂದು ಪಾಂಡೆ ಹೇಳಿದ್ದಾರೆ.
ಭೂಗತ ಜಗತ್ತಿನ ಡಾನ್ ಛೋಟಾ ರಾಜನ್ ನಿಂದ ಬೇರೆಯಾದ ಬಳಿ ಪೂಜಾರಿ 2019 ರಲ್ಲಿ ಸೆನೆಗಲ್ನಲ್ಲಿ ಬಂಧನಕ್ಕೊಳಗಾಗಿದ್ದ, ನಂತರ ಜಾಮೀನು ಪಡೆದು ದಕ್ಷಿಣ ಆಫ್ರಿಕಾಗೆ ಪರಾರಿಯಾಗಿದ್ದ, ಅಲ್ಲಿ ಆತ ಮಾದಕವಸ್ತು ಕಳ್ಳಸಾಗಣೆ ಮತ್ತು ಸುಲಿಗೆಗಳಲ್ಲಿ ತೊಡಗಿಸಿಕೊಂಡಿದ್ದ.
ಭಾರತೀಯ ಗುಪ್ತಚರ ಮೂಲಗಳ ಪ್ರಕಾರ, ರವಿ ಪೂಜಾರಿ ದಕ್ಷಿಣ ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ಆಂಥೋನಿ ಫರ್ನಾಂಡಿಸ್ ಎಂದು ಸುಳ್ಳು ಹೇಳಿ ತಲೆಮರೆಸಿಕೊಂಡಿದ್ದ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.