ನವದೆಹಲಿ: ಉತ್ತರ ಪ್ರದೇಶದ ರಾಜ್ಯ ವಿಧಾನಸಭೆಗೆ ಲಿಖಿತ ಉತ್ತರವನ್ನು ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಗಲಭೆಗೆ ಸಂಬಂಧಿಸಿದ ಘಟನೆಗಳಿಂದ ಮೃತಪಟ್ಟ ಜನರ ಕುಟುಂಬಗಳಿಗೆ ರಾಜ್ಯ ಸರ್ಕಾರ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಎಂದಿದ್ದಾರೆ.
ಸಮಾಜವಾದಿ ಪಕ್ಷದ ಸದಸ್ಯ ರಾಕೇಶ್ ಪ್ರತಾಪ್ ಸಿಂಗ್ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನೀಡಿರುವ ಅವರು, “ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ ಗಲಭೆಗಳು, ಪ್ರತಿಭಟನೆಗಳು, ಧರಣಿ ಪ್ರಕರಣಗಳಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಘಟನೆಗಳಲ್ಲಿ ಪ್ರತಿಭಟನಾಕಾರರಿಂದ ಕಲ್ಲು ತೂರಾಟ ನಡೆದ ಪರಿಣಾಮ 400 ಪೊಲೀಸರು ಗಾಯಗೊಂಡಿದ್ದಾರೆ ಮತ್ತು 61 ಪೊಲೀಸರು ಬಂದೂಕಿನಿಂದ ಗಾಯಗೊಂಡಿದ್ದಾರೆ” ಎಂದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯ ಸಂದರ್ಭದಲ್ಲಿ ಈ ಎಲ್ಲಾ ಸಾವು ನೋವುಗಳು ಸಂಭವಿಸಿವೆ.
ಭದ್ರತಾ ವ್ಯವಸ್ಥೆಗಳನ್ನು ಮಾಡುವಲ್ಲಿ ರಾಜ್ಯವು ಮಾಡಿದ ವೆಚ್ಚದ ಮರುಪಾವತಿಯಾಗಿ 114 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ 1 ಕೋಟಿ ರೂ.ಗಳ ನೋಟಿಸ್ ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಹಿಂಸಾಚಾರದ ನಂತರ, ಯೋಗಿ ಆದಿತ್ಯನಾಥ್ ತಮ್ಮ ಸರ್ಕಾರವು ದಂಗೆಕೋರರ ಆಸ್ತಿಯನ್ನು ವಶಪಡಿಸಿಕೊಳ್ಳುವುದಾಗಿ, ಹಾನಿಗೊಳಗಾದ ಸಾರ್ವಜನಿಕ ಆಸ್ತಿಯ ವೆಚ್ಚವನ್ನು ವಸೂಲಿ ಮಾಡುವುದಾಗಿ ಘೋಷಿಸಿತ್ತು.
ಸಿಎಎ ವಿರೋಧಿ ದಂಗೆಕೋರರಿಗೆ ಅವರ ಆಸ್ತಿ ವಶಪಡಿಸಿಕೊಳ್ಳುವ ನೋಟಿಸ್ಗಳನ್ನು ಸರ್ಕಾರ ನೀಡಿತ್ತು. ಅಲಿಗಢದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರು ಭವಿಷ್ಯದಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬ ಭರವಸೆಯೊಂದಿಗೆ 50 ಲಕ್ಷ ರೂ. ಬಾಂಡ್ ಬರೆದುಕೊಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.