ಗುವಾಹಟಿ: ರಾಜ್ಯ ಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯ ಉದ್ದೇಶಕ್ಕಾಗಿ ಅಸ್ಸಾಂ ಅನ್ನು ಪ್ರಾದೇಶಿಕ ಕ್ಷೇತ್ರಗಳಾಗಿ ಮರು ವಿಂಗಡಿಸಲು ಡಿಲಿಮಿಟೇಶನ್ (ಸೀಮಾ ನಿರ್ಣಯ) ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತಿದೆ. ಭಾರೀ ವಿಳಂಬವನ್ನು ಕಂಡಿರುವ ಈ ಕಾರ್ಯವನ್ನು ಆದಷ್ಟು ಬೇಗ ಮಾಡಿ ಮುಗಿಸಲು ಮೋದಿ ಸರ್ಕಾರ ಮುಂದಾಗಿದೆ.
ಈ ನಿಟ್ಟಿನಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶವನ್ನು ಹೊರಡಿಸಿದ್ದು, ಈ ಆದೇಶದ ಪ್ರಕಾರ, ಪ್ರಕ್ರಿಯೆಯ ಅನುಷ್ಠಾನಕ್ಕೆ ಈಗಾಗಲೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಅನುಮೋದನೆಯನ್ನು ಪಡೆದುಕೊಂಡಿದೆ. ಇದರಿಂದಾಗಿ 12 ವರ್ಷಗಳ ವಿಳಂಬದ ಬಳಿಕ ಅಲ್ಲಿ ಸೀಮಾ ನಿರ್ಣಯ ಪ್ರಕ್ರಿಯೆ ಆರಂಭವಾಗುತ್ತಿದೆ.
2008ರಲ್ಲಿ ರಾಷ್ಟ್ರದಾದ್ಯಂತ ಗಡಿ ನಿರ್ಣಯ ಪ್ರಕ್ರಿಯೆಯನ್ನು ನಡೆಸಲಾಯಿತು, ಆದರೆ ನಾಲ್ಕು ರಾಜ್ಯಗಳನ್ನು ಇದರಿಂದ ದೂರವಿಡಲಾಗಿತ್ತು. ಪ್ರಕ್ರಿಯೆಯ ಅನುಷ್ಠಾನವು ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂಬ ಆತಂಕದಲ್ಲಿ ರಾಷ್ಟ್ರಪತಿಗಳು ಅಸ್ಸಾಂನಲ್ಲಿ ಸೀಮಾ ನಿರ್ಣಯ ಪ್ರಕ್ರಿಯೆಯನ್ನು ಮುಂದೂಡಿದ್ದರು.
ಅಸ್ಸಾಂ ಮಾತ್ರವಲ್ಲದೇ ಆಗ ಸೀಮಾ ನಿರ್ಣಯ ಪ್ರಕ್ರಿಯೆಯನ್ನು ಮಣಿಪುರ, ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದಲ್ಲೂ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತಂದಿರಲಿಲ್ಲ.
ಪ್ರಸ್ತುತ ಈ ರಾಜ್ಯಗಳಲ್ಲಿ ಬಂಡಾಯ ತಗ್ಗಿದೆ ಮತ್ತು ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯೂ ಸಂಪೂರ್ಣ ನಿಯಂತ್ರಣದಲ್ಲಿದೆ. ಹೀಗಾಗಿ ಸೀಮಾ ನಿರ್ಣಯ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲು ಇದು ಸುಸಂದರ್ಭವಾಗಿದೆ ಎಂದು ಪರಿಗಣಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.