ನವದೆಹಲಿ: ಕೊರೋನವೈರಸ್ ಭೀತಿ ಭಾರತದಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವೈರಸ್ ಅನ್ನು ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ಪರಿಶೀಲನೆಗಳನ್ನು ನಡೆಸುವ ಸಲುವಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಕೊರೋನ ಬಗ್ಗೆ ಆತಂಕಪಡಬಾರದಾಗಿ ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದುವರೆಗೆ ಭಾರತದಲ್ಲಿ ಒಟ್ಟು 6 ಕೊರೋನವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇನ್ನೂ ಆರು ಮಂದಿಯನ್ನು ಶಂಕೆಯ ಮೇರೆಗೆ ತೀವ್ರ ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ತಾವು ಆಗಮಿಸಿದ ಸ್ವಯಂ ಘೋಷಣೆ ನಮೂನೆಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಅವರ ಸಂಪರ್ಕ ವಿವರಗಳು, ಪ್ರಯಾಣದ ಇತಿಹಾಸ ಮತ್ತು ಅಲ್ಲಿನ ಇತರ ಜನರೊಂದಿಗಿನ ಸಂಪರ್ಕದ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.
ಮಾರ್ಚ್ 3 ರಂದು ಅಥವಾ ಅದಕ್ಕೂ ಮೊದಲು ಇಟಲಿ, ಇರಾನ್, ದಕ್ಷಿಣ ಕೊರಿಯಾ ಮತ್ತು ಜಪಾನ್ ಪ್ರಜೆಗಳಿಗೆ ನೀಡಲಾದ ಎಲ್ಲಾ ನಿಯಮಿತ ವೀಸಾಗಳು ಮತ್ತು ಇ-ವೀಸಾಗಳನ್ನು ಭಾರತವು ಅಮಾನತುಗೊಳಿಸಿದೆ ಮತ್ತು ಇನ್ನೂ ಅವರಿಗೆ ಭಾರತಕ್ಕೆ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತದ ಎಲ್ಲಾ ವಿಮಾನನಿಲ್ದಾಣಗಳಲ್ಲೂ ಕಟ್ಟುನಿಟ್ಟಿನ ತಪಾಸಣಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರನ್ನು ಸ್ಕ್ರೀನಿಂಗ್ ಮಾಡಲಾಗುತ್ತದೆ.
ಚೀನಾದಲ್ಲಿ, ಒಟ್ಟು 80,270 ಜನರು ಸೋಂಕಿಗೆ ಒಳಗಾಗಿದ್ದು, 49,856 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು 2,981 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ದಕ್ಷಿಣ ಕೊರಿಯಾದಲ್ಲಿ ಸೋಂಕಿನಿಂದಾಗಿ 28 ಮಂದಿ ಮೃತಪಟ್ಟಿದ್ದಾರೆ. 5 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.