ನವದೆಹಲಿ: ಭಾರತದಲ್ಲಿ ಇದುವರೆಗೆ 28 ಕೊರೋನಾವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಬುಧವಾರ ಹೇಳಿದ್ದಾರೆ.
ದೆಹಲಿ ಮತ್ತು ಹರಿಯಾಣದಲ್ಲಿ ತಲಾ 1 ಪ್ರಕರಣಗಳು, ಆಗ್ರಾದಲ್ಲಿ 1, ಜೈಪುರದಲ್ಲಿ 17 (16 ಇಟಲಿ ಪ್ರಜೆಗಳು, ಒರ್ವ ಚಾಲಕ)ನಿಗೆ ಸೋಂಕು ಇರುವುದು ವರದಿಯಾಗಿದೆ. ತೆಲಂಗಾಣದಲ್ಲೂ ಸೋಂಕು ಪತ್ತೆಯಾಗಿದೆ. ಕೇರಳದಲ್ಲಿ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು ಅವರು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದ 25 ಪ್ರಕರಣಗಳು ಈ ವಾರ ಪತ್ತೆಯಾಗಿವೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, “ಪ್ರಕರಣಗಳು ಹೆಚ್ಚಾದರೆ ಸಂಪೂರ್ಣವಾಗಿ ಸಿದ್ಧರಾಗಿರಲು ಮತ್ತು ಭವಿಷ್ಯದಲ್ಲಿ ಅಗತ್ಯವಿದ್ದರೆ ಉತ್ತಮ-ಗುಣಮಟ್ಟದ ಪ್ರತ್ಯೇಕ ವಾರ್ಡ್ಗಳನ್ನು ಅಭಿವೃದ್ಧಿಪಡಿಸಲು ನಾವು ದೆಹಲಿ ಸರ್ಕಾರವನ್ನು ಕೋರಿದ್ದೇವೆ. ನಮ್ಮ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಸೌಲಭ್ಯಗಳನ್ನು ವೀಕ್ಷಿಸಿದ್ದಾರೆ. ಒಟ್ಟು 34 ಕ್ರಿಯಾತ್ಮಕ ಲ್ಯಾಬೋರೇಟರಿಗಳನ್ನು ಸ್ಥಾಪನೆ ಮಾಡಿದ್ದೇವೆ, ಇನ್ನೂ 19 ಲ್ಯಾಬೋರೇಟರಿಗಳನ್ನು ಸ್ಥಾಪಿಸಲು ಯೋಜಿಸಿದ್ದೇವೆ” ಎಂದಿದ್ದಾರೆ.
ವೈರಸ್ ಹರಡುವುದನ್ನು ತಡೆಗಟ್ಟಲು ಹಸ್ತಲಾಘವ ಮಾಡುವ ಬದಲು ನಮಸ್ತೆ ಮಾಡಿ, ಸೀನುವಾಗ ಮತ್ತು ಕೆಮ್ಮುವಾಗ ಟಿಶ್ಶು / ಕರವಸ್ತ್ರ ಬಳಕೆ ಮಾಡಿ, ಸಾರ್ವಜನಿಕ ಸಭೆ, ಸಮಾರಂಭಗಳನ್ನು ಆದಷ್ಟು ನಿರ್ಲಕ್ಷ್ಯಿಸಿ ಎಂದು ಅವರು ಸಲಹೆಗಳನ್ನು ನೀಡಿದ್ದಾರೆ.
ಭಾರತದಲ್ಲಿ ಕೊರೋನಾವೈರಸ್ ಪತ್ತೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೋಳಿ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ. “COVID-19 ನೋವೆಲ್ ಕೊರೋನಾವೈರಸ್ ಹರಡುವುದನ್ನು ತಪ್ಪಿಸಲು ಸಾಮೂಹಿಕ ಕೂಟಗಳನ್ನು ಕಡಿಮೆ ಮಾಡಲು ವಿಶ್ವದಾದ್ಯಂತ ತಜ್ಞರು ಸಲಹೆಗಳನ್ನು ನೀಡಿದ್ದಾರೆ. ಆದ್ದರಿಂದ, ಈ ವರ್ಷ ನಾನು ಯಾವುದೇ ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.