ಲಕ್ನೋ: ಹಾನಿಗೊಳಗಾದ ಸಾರ್ವಜನಿಕ ಆಸ್ತಿಗಳ ಮೊತ್ತವನ್ನು ದಂಗೆಕೋರರಿಂದಲೇ ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಅನುವು ಮಾಡಿಕೊಡವ ಸುಗ್ರೀವಾಜ್ಞೆಯನ್ನು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ತಂದಿದೆ.
ದಂಗೆಕೋರರ ಮಾಹಿತಿಯುಳ್ಳ ಪೋಸ್ಟರ್ಗಳನ್ನು ತೆಗೆದು ಹಾಕವಂತೆ ಅಲಹಾಬಾದ್ ನ್ಯಾಯಾಲಯ ನೀಡಿದ ತೀರ್ಪಿನ ಬಳಿಕ ಯೋಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದವರಿಂದಲೇ ಅದರ ಮೊತ್ತವನ್ನು ವಸೂಲಿ ಮಾಡುವ ನಿರ್ಧಾರವನ್ನೂ ಯೋಗಿ ಸರ್ಕಾರ ತೆಗೆದುಕೊಂಡಿತ್ತು. ಆದರೆ ಇದಕ್ಕೆ ಕಾನೂನಿನ ಮಾನ್ಯತೆ ಇರಲಿಲ್ಲ. ಹೀಗಾಗಿ ವಸೂಲಿ ಮಾಡುವ ಪ್ರಕ್ರಿಯೆಯನ್ನು ಕಾನೂನುಬದ್ಧಗೊಳಿಸುವ ಸಲುವಾಗಿ ಯೋಗಿ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.
ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸಲಾಗುತ್ತದೆ, ಆದರೆ ಪ್ರತಿಭಟನಾಕಾರರಿಗೆ ಹಿಂಸಾಚಾರ, ಬೆಂಕಿ ಹಚ್ಚುವಿಕೆ ಮತ್ತು ಸಾಮಾನ್ಯ ಜನರ ಶಾಂತಿ ಭಂಗದಂತಹ ಕೃತ್ಯವನ್ನು ಎಸಗಲು ನಾವು ಅನುಮತಿಸುವುದಿಲ್ಲ ಎಂದು ಸಿಎಎ ವಿರೋಧಿ ಪ್ರತಿಭಟನೆಯ ಆರಂಭದಿಂದಲೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದ್ದರು.
ಯೋಗಿ ಸರ್ಕಾರವು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಂಗೆಕೋರರನ್ನು ಗುರುತಿಸಿದೆ ಮತ್ತು ಅವರಿಗೆ ಹಾನಿಯಾದ ಆಸ್ತಿಗೆ ಮೊತ್ತವನ್ನು ನೀಡುವಂತೆ ಸೂಚಿಸಿದೆ. ಅಲ್ಲದೇ, ಹಲವು ದಂಗೆಕೋರರ ಫೋಟೋ, ವಿಳಾಸಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹೋರ್ಡಿಂಗ್ಸ್ ಮೂಲಕ ಹಾಕಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.