ನವದೆಹಲಿ: ಕೊರೋನವೈರಸ್ ಅನ್ನು ನಿಯಂತ್ರಿಸಲು ಸಹಕರಿಸದವರನ್ನು ಮತ್ತು ಸಮಾಜದಲ್ಲಿ ಭೀತಿ ಉಂಟುಮಾಡುವ ರೀತಿಯ ತಪ್ಪು ಮಾಹಿತಿ ಅಥವಾ ವದಂತಿಗಳನ್ನು ಹರಡುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಮುಂದಾಗಿದೆ.
ಕೊರೋನವೈರಸ್ ತಡೆಗಟ್ಟುವ ರಾಜ್ಯದ ಪ್ರಯತ್ನಗಳಿಗೆ ಸಹಕರಿಸದವರ ವಿರುದ್ಧ ಜೈಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಯೋಗಿ ಎಚ್ಚರಿಸಿದ್ದಾರೆ.
ಕೊರೊನಾವೈರಸ್ ಹಿನ್ನೆಲೆಯಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು ಯುಪಿ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ ಹೇಳಿದ್ದಾರೆ.
“ಯಾವುದೇ ಶಂಕಿತನು ಪರೀಕ್ಷೆಗೆ ಒಳಗಾಗಲು ನಿರಾಕರಿಸಿದರೆ ಅಥವಾ ಅಧಿಕಾರಿಗಳ ಕೈಗೆ ಸಿಗದೆ ಓಡಿಹೋದರೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅಂತಹ ರೋಗಿಗಳ ಮಾಹಿತಿಯನ್ನು ಮರೆಮಾಡಲು ಪ್ರಯತ್ನಿಸುವ, ಆರೋಗ್ಯ ತಂಡವಕ್ಕೆ ತನ್ನ ಕರ್ತವ್ಯ ಮಾಡಲು ಅಡ್ಡಿಪಡಿಸುವ ಯಾವುದೇ ವ್ಯಕ್ತಿಯ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ , ಕಾನೂನಿನ ಪ್ರಕಾರ ಅಪರಾಧಿಗಳನ್ನು ಜೈಲಿಗೆ ಕಳುಹಿಸಲಾಗುತ್ತದೆ “ಎಂದಿದ್ದಾರೆ.
ರಾಜ್ಯದ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಮತ್ತು ಯಾರೂ ಭಯಭೀತರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.