ನವದೆಹಲಿ: ಕಾಂಗ್ರೆಸ್ ಸದಸ್ಯರು ಮತ್ತು ಇತರ ಕೆಲವು ರಾಜಕೀಯ ಪಕ್ಷಗಳ ಪ್ರತಿಭಟನೆಯ ನಡುವೆಯೇ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದ ನಂತರ, ಗೋಗೊಯ್ ಅವರು ಸದನದಲ್ಲಿ ಹಾಜರಿದ್ದ ಎಲ್ಲ ಸದಸ್ಯರಿಗೂ ‘ನಮಸ್ತೆ’ ಮಾಡುವ ಮೂಲಕ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
ಸದನದ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಗೋಗೊಯ್ ಅವರನ್ನು ನಾಮನಿರ್ದೇಶಿತ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಘೋಷಣೆ ಮಾಡಿದ ತಕ್ಷಣ, ಕಾಂಗ್ರೆಸ್, ಡಿಎಂಕೆ, ಸಿಪಿಎಂ, ಐಯುಎಂಎಲ್ ಮತ್ತು ಇತರರು ತಮ್ಮ ಸ್ಥಳಗಳಲ್ಲಿ ಎದ್ದು ಪ್ರತಿಭಟನಾ ಘೋಷಣೆಗಳನ್ನು ಕೂಗಿದರು.
ಪ್ರಮಾಣವಚನ ಸ್ವೀಕರಿಸಿದ ನಂತರ ಗೋಗೊಯ್ ತನ್ನ ಆಸನ 131ಕ್ಕೆ ಮರಳಿದರು ಮತ್ತು ಇತರ ಸದಸ್ಯರಿಗೆ “ನಮಸ್ತೆ” ಎಂದರು. ಬಿಜೆಪಿಯ ಎಲ್ಲಾ ಸದಸ್ಯರು ಮತ್ತು ಅದರ ಮಿತ್ರಪಕ್ಷಗಳು ಅವರನ್ನು ರಾಜ್ಯಸಭೆಯಲ್ಲಿ ಸ್ವಾಗತಿಸಿದರು.
“ನಾವೆಲ್ಲರೂ ಸಾಂವಿಧಾನಿಕ ಸ್ಥಾನದಲ್ಲಿದ್ದೇವೆ, ನಮಗೆ ಪೂರ್ವನಿದರ್ಶನಗಳು ತಿಳಿದಿವೆ. ಭಾರತದ ರಾಷ್ಟ್ರಪತಿಗಳ ಅಧಿಕಾರಗಳು ನಮಗೆ ತಿಳಿದಿದೆ ಮತ್ತು ನಾವು ಸದನದಲ್ಲಿ ಏನನ್ನೂ ಮಾಡಬಾರದು ಎಂಬುದೂ ತಿಳಿದಿರುತ್ತದೆ. ನಿಮ್ಮ ಅಭಿಪ್ರಾಯಗಳು ಏನೇ ಇದ್ದರು ನೀವು ಸದನದ ಹೊರಗೆ ಹೇಳಬಹುದು. ಇದು ನಿಮ್ಮ ಸ್ವಾತಂತ್ರ್ಯ” ಎಂದು ಘೋಷಣೆ ಹಾಕಿದ ಸದಸ್ಯರಿಗೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.