ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಆತಂಕವನ್ನು ಸೃಷ್ಟಿ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ 4 ಗಂಟೆಗೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
COVID-19 ಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಅದನ್ನು ಎದುರಿಸುವ ಪ್ರಯತ್ನಗಳ ಕುರಿತು ಪ್ರಧಾನಿ ಗುರುವಾರ ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬುಧವಾರ ಭಾರತದಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ಮೋದಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಭಾರತವು ಈವರೆಗೆ 3 ಸಾವುಗಳು ಕೊರೋನವೈರಸ್ ಕಾರಣದಿಂದಾಗಿ ಸಂಭವಿಸಿದೆ.
COVID-19 ಭೀತಿಯ ವಿರುದ್ಧ ಹೋರಾಡಲು ಯಾಂತ್ರಿಕ ವ್ಯವಸ್ಥೆಗಳನ್ನು ರೂಪಿಸುವಲ್ಲಿ ವ್ಯಕ್ತಿಗಳು, ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರಧಾನಿ ಒತ್ತಿ ಹೇಳಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಅಧಿಕಾರಿಗಳು ಮತ್ತು ತಾಂತ್ರಿಕ ತಜ್ಞರು ಚರ್ಚೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದಕ್ಕೂ ಮುನ್ನ ಭಾನುವಾರ ಪ್ರಧಾನಿ ಸಾರ್ಕ್ ನಾಯಕರ ವಿಡಿಯೋ ಕಾನ್ಫರೆನ್ಸ್ ನಡೆಸಿ 10 ಮಿಲಿಯನ್ ಡಾಲರ್ ತುರ್ತು ನಿಧಿಯನ್ನು ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.